ಪ್ರೊ.ಜಿ.ವೆಂಕಟಸುಬ್ಬಯ್ಯ
From Wikipedia
ಪ್ರೊ|| ಜಿ ವೆಂಕಟಸುಬ್ಬಯ್ಯ ಕನ್ನಡದ ಏಳಿಗೆಗಾಗಿ ದುಡಿದವರು, ದುಡಿಯುತ್ತಿರುವವರು. ಬೆಂಗಳೂರಿನ ಇವರು ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಇವರ 'ಇಗೋ ಕನ್ನಡ' ಎಂಬ ಪ್ರಜಾವಾಣಿ ಅಂಕಣ ಸಮಸ್ತ ಕನ್ನಡಿಗರ ಬಾಯಿಮಾತಿನಲ್ಲಿರುವ ಅಂಕಣ. ೧೯೯೧ ರಿಂದ ಪ್ರಾರಂಭಿಸಿ ವೆಂಕಟಸುಬ್ಬಯ್ಯನವರು ಈ ಅಂಕಣದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವರ್ಷ ೨೦೦೫ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನಿತ್ತು ಗೌರವಿಸಿದೆ.
ಪರಿವಿಡಿ |
[ಬದಲಾಯಿಸಿ] ಜೀವನ
೧೯೧೩ರಲ್ಲಿ ಮೈಸೂರಿನಲ್ಲಿ ಜನಿಸಿದ ಇವರು,ಮೈಸೂರಿನಲ್ಲಿಯೆ ಬೆಳೆದುಬಂದದ್ದು.ಇವರ ತಂದೆ, ಗಂಜಾಂ ತಿಮ್ಮಣ್ಣಯ್ಯನವರು ಸಂಸ್ಕೃತ ಹಾಗು ಕನ್ನಡದ ವಿದ್ವಾಂಸರಾಗಿದ್ದರು. ೧೯೩೭ರಲ್ಲಿ ಮೈಸೂರು ಮಹಾರಾಜ ಕಾಲೇಜಿನಿಂದ ಎಂ.ಎ. ಪದವಿಯನ್ನು ಪಡೆದ ಇವರಿಗೆ ಪ್ರಥಮ ಸ್ಥಾನ ಪಡೆದಕ್ಕಾಗಿ ಸುವರ್ಣ ಪದಕವನ್ನು ಬಹುಮಾನವಾಗಿ ಕೊಡಲಾಯಿತು. ಮುಂದೆ ಇವರು ಬಿ.ಟಿ. ಪದವಿಯನ್ನೂ ಕೂಡ ಪಡೆದರು.
೧೯೩೯ ರಿಂದ ಪ್ರಾರಂಭಿಸಿ ಸುಮಾರು ೪೦ ವರ್ಷಗಳ ಕಾಲ ಇವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವರು.
[ಬದಲಾಯಿಸಿ] ಇಗೋ ಕನ್ನಡ
'ಇಗೋ ಕನ್ನಡ' - ೧೨-೫-೯೧ ರಿಂದ ಕನ್ನಡದ ಜನಪ್ರಿಯ ಪತ್ರಿಕೆಯಾದ ಪ್ರಜಾವಾಣಿಯಲ್ಲಿ ಪುಟ್ಟ ಅಂಕಣವಾಗಿ ಪ್ರಾರಂಭವಾಯಿತು. ಕನ್ನಡದ ಶಿಷ್ಟ ಬರವಣಿಗೆಯನ್ನು ಸಾರ್ವಜನಿಕರಿಗೆ ತಿಳಿಯಪಡಿಸಲು ಆರಂಭಿಸಿದ ಈ ಅಂಕಣವು ಕೆಲವೇ ದಿನಗಳಲ್ಲಿ ಹಲವರ ಗಮನವನ್ನೂ, ಉತ್ಸಾಹವನ್ನೂ ತನ್ನತ್ತ ಸೆಳೆಯಿತು. ಕನ್ನಡವನ್ನು ಅಭ್ಯಾಸ ಮಾಡಿದವರಿಂದಲೂ, ಶ್ರೀಸಾಮಾನ್ಯರಿಂದಲೂ ಬಂದ ವೈವಿದ್ಯಮಯ ಪ್ರಶ್ನೆಗಳಿಗೆ ಉತ್ತರ ನೀಡುವುದರಲ್ಲಿ ತೊಡಗಿಸಿಕೊಂಡ ಈ ಅಂಕಣ, ಹಲವರ ಭಾಷೆಗೆ ಸಂಬಂಧಿಸಿದ ಸಂದೇಹಗಳನ್ನು ನಿವಾರಣೆ ಮಾಡಿತು. ಇಂತಹ ಭಾಷೆಗೆ ಸಂಬಂಧಿಸಿದ ಪ್ರಶ್ನೋತ್ತರಗಳನ್ನು ಒಟ್ಟುಗೂಡಿಸಿ ವೆಂಕಟಸುಬ್ಬಯ್ಯನವರು ಇಗೋ ಕನ್ನಡ ಎಂಬ ಹೆಸರಲ್ಲೇ ಒಂದು ಸಾಮಾಜಿಕ ನಿಘಂಟನ್ನು ಹೊರತಂದದ್ದುಂಟು.
[ಬದಲಾಯಿಸಿ] ಪ್ರಶಸ್ತಿಗಳು
ಇವರು ಪಡೆದ ಪ್ರಶಸ್ತಿಗಳು
- ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.
- ನಾಡೋಜ ಪ್ರಶಸ್ತಿ (೨೦೦೫)
[ಬದಲಾಯಿಸಿ] ಉಲ್ಲೇಖಗಳು
- ಮಲ್ಲಿಗೆ (ಮಾಸಪತ್ರಿಕೆ)ಯ ಸೆಪ್ಟೆಂಬರ್ ೨೦೦೫ರ ಸಂಚಿಕೆ.
[ಬದಲಾಯಿಸಿ] ಬಾಹ್ಯ ಸಂಪರ್ಕಗಳು
ಪ್ರೊ. ಜಿ ವೆಂಕಟಸುಬ್ಬಯ್ಯನವರಿಗೆ ನಾಡೋಜ ಪ್ರಶಸ್ತಿ - ಪ್ರಜಾವಾಣಿ ವರದಿ