ಚರ್ಚೆಪುಟ:ಸಹಾಯ:ಹೊಸ ಲೇಖನವೊಂದನ್ನು ಪ್ರಾರಂಭಿಸುವುದು ಹೇಗೆ?
From Wikipedia
ನೃಪತುಂಗ
ನೃಪತುಂಗನು ರಾಷ್ಟ್ರಕೂಟ ವಂಶದ ರಾಜನಾಗಿದ್ದನು. ರಾಷ್ಟ್ರಕೂಟರ ಕಾಲದಲ್ಲಿ ಕನ್ನಡದಲ್ಲಿ ಹಲವಾರು ರೀತಿಯ ರಚನೆಗಳು ಇದ್ದವೆಂದು ತಿಳಿದು ಬರುವುದು. ಬದಂಡೆ, ಚತ್ರಾಣ, ಮುಂತಾದ ಕಾವ್ಯಭೇದಗಳಿದ್ದವು. ಪ್ರಾಂತದ ಭಾಷೆ ತಿರುಳುಗನ್ನಡವೆಂದು ಹೆಸರು ಪಡೆದಿತ್ತು. ಆ ಸಮಯದಲ್ಲಿ ಮತ್ತು ನೃಪತುಂಗನಿಗಿಂತಲು ಹಿಂದೆ ಅನೇಕ ಕವಿಗಳಿದ್ದರೆಂದು ರಾಜಾ ನೃಪತುಂಗನು ತನ್ನ ’’ಕವಿರಾಜಮಾರ್ಗ’’ ಕೃತಿಯಲ್ಲಿ ತಿಳಿಸಿದ್ದಾನೆ. ರಾಮಾಯಣ, ಮಹಾಭಾರತಗಳ ಸಂಕ್ಷಿಪ್ತ ಕನ್ನಡರೂಪ ಲಭ್ಯವಾಗಿದ್ದವು. ೫ ನೇ ಶತಮಾನದ ಕನ್ನಡದ ಶಾಸನದ ನಂತರದಲ್ಲಿ ಪ್ರಥಮವಾಗಿ ರಚಿತವಾಗಿರುವ ಕವಿರಾಜಮಾರ್ಗದಲ್ಲಿ ಕಾವೇರಿಯಿಂದ ಗೋದಾವರಿಯವರೆಗೆ ಇದ್ದ ನಾಡು ಕನ್ನಡನಾಡೆಂದು ತಿಳಿಸಲಾಗಿದೆ. ಆ ಸಮಯದಲ್ಲಿ ಹಲವಾರು ಜೈನ ಕವಿಗಳಿದ್ದರು. ಶಿವಕೋಟಿ ಆಚಾರ್ಯನ ‘’ವಡ್ಡಾರಾಧನೆ’’ ಪ್ರಥಮ ಗದ್ಯಕೃತಿ ರಚಿತವಾಗಿತ್ತು. ನೃಪತುಂಗನ ರಚನೆಯು ಶಾಸ್ತ್ರಗ್ರಂಥವಾಗಿರುವದು. ಕಾವ್ಯದೋಷಗಳು, ಅಲಂಕಾರಗಳು ಈ ಗ್ರಂಥದಲ್ಲಿ ವರ್ಣಿತವಾಗಿವೆ. ಕನ್ನಡನಾಡಿನ ಜನರು ‘’ಓದದೆಯೇ ಕಾವ್ಯ ಪ್ರಯೋಗದಲ್ಲಿ ನಿಪುಣರು’’ ಎಂದು ನೃಪತುಂಗನು ಹೊಗಳಿದ್ದಾನೆ. ಇವನ ಗ್ರಂಥದಲ್ಲಿ ಹಲವಾರು ಸುಂದರ ಪದ್ಯಗಳಿರುವವು. ರಾಜನಾಗಿಯೂ ಸಹ ನೃಪತುಂಗ ಉತ್ತಮ ಆಡಳಿತವನ್ನು ನಡೆಸಿದನು. ಶ್ರೀ ವಿಜಯನೆಂಬುವವನು ’’ಕವಿರಾಜಮಾರ್ಗ’’ ಕಾವ್ಯ ಬರೆದ್ನೆಂದೂ ಪ್ರತೀತಿ ಇದೆ.