ಕಿರಣ್‌ ಬೇಡಿ

From Wikipedia

ಭಾರತದಲ್ಲಿ ಪೋಲೀಸ್ ಸೇವೆ ಸೇರಿದ ಮೊದಲ ಭಾರತೀಯ ಮಹಿಳೆ ಕಿರಣ್ ಬೇಡಿ.ಪಂಜಾಬ್‌ನ ಅಮೃತಸರದಲ್ಲಿ ೧೯೪೯ ಜೂನ್ ೯ರಂದು ಜನಿಸಿದರು.ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ, ಕಾನೂನು ಹಾಗೂ ಡಾಕ್ಟರೇಟ್ ಪದವಿ ಪಡೆದ ನಂತರ ರಾಜ್ಯಶಾಸ್ತ್ರದ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದರು.ಆದರೆ ಮನದಾಳದ ಆಸೆಯ ಕರೆಗೆ ಓಗೊಟ್ಟು ಮುಂದೆ ಪೊಲೀಸ್ ಅಧಿಕಾರಿಯಾದರು.ಇವರು ಪೊಲೀಸ್ ವೃತ್ತಿಯಲ್ಲಿ ಎದುರಿಸಿರುವ ಸವಾಲುಗಳಂತೆ ,ಗಳಿಸಿರುವ ಯಶಸ್ಸು ಹಾಗೂ ಜನಪ್ರಿಯತೆ ಕೂಡಾ ಅಪಾರ.ಗಣ್ಯವ್ಯಕ್ತಿಗಳ ಭದ್ರತೆ, ಸಂಚಾರ ಸಮಸ್ಯೆಗಳ ನಿವಾರಣೆ,ಮಾದಕವಸ್ತು ಚಟುವಟಿಕೆಗಳ ನಿಯಂತ್ರಣ - ಇವರ ಆಸಕ್ತಿಯ ಕೇಂದ್ರಗಳು.ಇವರ ಅಧಿಕಾರದ ಅವಧಿಯಲ್ಲಿ ತಿಹಾರ್ ಜೈಲಿನಲ್ಲಿ ಇವರು ಕೈಗೊಂಡ ಸುಧಾರಣೆಗಳು ಮಹತ್ವದ್ದೆನಿಸಿವೆ.ವಿಶ್ವಸಂಸ್ಥೆ ಯ ಶಾಂತಿಪಾಲನಾ ವಿಭಾಗದ ಸಲಹೆಗಾರರಾಗಿ ಕೆಲಸ ನಿರ್ವಹಿಸಿದ್ದಾರೆ.ಅಲ್ಲಿ ಇವರ ಸೇವೆಗೆ ಮೆಚ್ಚುಗೆಯಾಗಿ ವಿಶ್ವಸಂಸ್ಥೆ ಪದಕ ನೀಡಿ ಗೌರವಿಸಿದೆ.ಇವರ ಸೇವೆಗೆ ಮೆಚ್ಚುಗೆಯಾಗಿ ಇವರಿಗೆ ರಾಮನ್ ಮ್ಯಾಗ್ಸೇಸೆ ಪುರಸ್ಕಾರ ಸಂದಿದೆ.