ರಾಘವೇಂದ್ರ ಪಾಟೀಲ್

From Wikipedia

ರಾಘವೇಂದ್ರಪಾಟೀಲರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮ ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಅಲ್ಲಿನ ಜೂನಿಯರ್ ಕಾಲೇಜಿನ ಪ್ರಿನ್ಸಿಪಾಲರು. ಜೀವಶಾಸ್ತ್ರ ಅವರ ಅಧ್ಯಯನ ವಿಷಯ. ಒಟ್ಟು ಹದಿಮೂರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಜೊತೆಗೇ ಆನಂದಕಂದ ಗ್ರಂಥಮಾಲೆಯನ್ನು ನಡೆಸುತ್ತಿದ್ದಾರೆ. ಸಂವಾದ ಎಂಬ ಸಾಹಿತ್ಯ ಪತ್ರಿಕೆಯನ್ನು ಕಳೆದ ಎರಡು ದಶಕಗಳಿಂದ ಸಂಪಾದಿಸುತ್ತಿದ್ದಾರೆ. ಹಳ್ಳಿಯ ಆ ಶಾಲೆಯ ಮಕ್ಕಳಿಗಾಗಿ ಕಳೆದ ಮೂರು ವರ್ಷಗಳಿಂದ ರಂಗತರಬೇತಿ ಶಿಬಿರ ನಡೆಸುತ್ತಿದ್ದಾರೆ

ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನವರಾದ ಶ್ರೀ ಪಾಟೀಲರು ಕನ್ನಡದ ಗ್ರಾಮೀಣ ಬದುಕು ಬದಲಾಗುತ್ತಿರುವ ಪರಿಯನ್ನು ಬಹಳ ಸೊಗಸಾಗಿ ಚಿತ್ರಿಸಿದ್ದಾರೆ. ಅವರ "ಲಯ" ಎಂಬ ಕತೆ, "ದೇಸಗತಿ" ಎಂಬ ಇನ್ನೊಂದು ಕತೆ ಹೆಚ್ಚು ಚರ್ಚಿತವಾಗಿವೆ. ಅವರ "ತೇರು" ಕಾದಂಬರಿ ಜಮೀನುದಾರಿಕೆ, ಧರ್ಮ, ನಂಬಿಕೆಗಳು, ರಾಜಕೀಯದ ಚಲನವಲನ, ಮನುಷ್ಯ ಸಂಬಂಧಗಳ ಅಚ್ಚರಿ ಇವನ್ನೆಲ್ಲ ಬಿಡಿಸಿಡುತ್ತದೆ. ಕತೆ ಹೇಳುವ ರೀತಿಯಲ್ಲೂ ಪಾಟೀಲರು ಮಹತ್ವದ ಪ್ರಯೋಗಗಳನ್ನು ಮಾಡಿದ್ದಾರೆ.

ಹಾಗೆಯೇ ಲಯ, ಮತ್ತು ದೇಸಗತಿ ಕತೆಗಳನ್ನೂ. ಮಾಹಿತಿ ತಂತ್ರಜ್ಞಾನದ ಲೋಕದಿಂದ ಹೊರತಾದ ಇನ್ನೊಂದ ವಾಸ್ತವದ ಜೀವಂತ ಚಿತ್ರಣ ಪಾಟೀಲರ ಕತೆಗಳಲ್ಲಿ ದೊರೆಯುತ್ತದೆ.

ಇವರ ತೇರು ಕಾದಂಬರಿಗೆ ೨೦೦೫ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ರಾಘವೇಂದ್ರ ಪಾಟೀಲರ ಕೆಲ ಕೃತಿಗಳು:

  • ಪ್ರತಿಮೆಗಳು
  • ಬಾಳವ್ವನ ಕನಸುಗಳು
  • ಮಾಯಾವಿ ಮುಖಗಳು
  • ದೇಸಗತಿ
  • ನವಮೇಘ ರೂಪಿ
  • ವಾಗ್ವಾದ
  • ತೇರು
  • ಕಾಡಿನ ಹುಡುಗ ಕೃಷ್ಣ (ಶ್ರೀ ಡಿ.ಎಸ್.ನಾಗಭೂಷಣರವರ ಜೊತೆಗೆ ಸಹಸಂಪಾದನೆ)
  • ಮಾಸ್ತಿ ಸಾಹಿತ್ಯ ಸಮಗ್ರ ದರ್ಶನ (ಶ್ರೀ ಡಿ.ಎಸ್.ನಾಗಭೂಷಣರವರ ಜೊತೆಗೆ ಸಹಸಂಪಾದನೆ)



ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.