ರಾಗಿ ಬೆಳೆ.

From Wikipedia

ರಾಗಿ ಬೆಳೆ, ದಕ್ಷಿಣ ಭಾರತದಲ್ಲಿ ಹೆಸರುವಾಸಿಯಾಗಿದೆ. ಕರ್ನಾಟಕ ಬಿಟ್ಟರೆ, ತಮಿಳುನಾಡು, ಮತ್ತು ಮಹಾರಾಷ್ಟ್ರ ರಾಜ್ಯಗಳು ರಾಗಿಯನ್ನು ಹೆಚ್ಚಾಗಿ ಬೆಳೆಯುತ್ತಿವೆ. ಇದನ್ನು’ಫಿಂಗರ್ ಮಿಲೆಟ್” ಎಂದೂ ಕರೆಯುತ್ತಾರೆ. ಪುಷ್ಕಳ ಪೋಶಕಾಂಷವಿರುವ ಈ ಧಾನ್ಯ , ಬಡವರ ಆಧಾರಿಯಾಗಿದೆ.ವಿಶ್ವದ ತೃಣಧಾನ್ಯ ಬೆಳೆಗಳಲ್ಲಿ, ಸಜ್ಜೆ, ನವಣೆ, ಬರಗು ಬೆಳೆಗಳನಂತರದ ಸ್ಥಾನ, ರಾಗಿಯದು. ರಾಗಿ ಬೆಸಾಯದಲ್ಲಿ ಭಾರತಕ್ಕೆ ಅಗ್ರಸ್ಥಾನವಿದೆ. ವರ್ಷಂಪ್ರತಿ ಸುಮಾರು ೨೨ ಲಕ್ಷ ಹೆಕ್ಟೇರುಪ್ರದೇಶದಲ್ಲಿ ರಾಗಿ ಬೆಳೆದು ೨೬ ರಿಂದ ೨೮ ಲಕ್ಷ ಟನ್ ರಾಗಿಯನ್ನು ದೇಶದಲ್ಲಿ ಉತ್ಪಾದಿಸಲಾಗುತ್ತಿದೆ. ಉತ್ಪಾದನೆಯ ಮುಕ್ಕಾಲುಪಾಲು ಕರ್ನಾಟಕ, ತಮಿಳ್ನಾಡು, ಅಂಧ್ರಪ್ರದೇಶ, ಮತ್ತು ಮಹಾರಾಷ್ಟ್ರ ರಾಜ್ಯಗಳು ಉತ್ಪಾದಿಸುತ್ತಿವೆ.ಇನ್ನುಳಿದ ಕಾಲು ಭಾಗ, ಬಿಹಾರ, ಉತ್ತರ ಪ್ರದೇಶ, ಒರಿಸ್ಸ, ಮಧ್ಯ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶಗಳು ಪೂರೈಸುತ್ತವೆ.


ರಾಗಿ ತಳಿ ಅಭಿವೃದ್ಧಿ ೧೯೧೩ ನೆ ಇಸವಿಯಷ್ಟು ಹಿಂದೆಯೇ ಪ್ರಾರಂಭವಾಗಿತ್ತು. ಖ್ಯಾತ ತಜ್ಞ ಲೆಸ್ಲಿ ಕೋಲ್ ಮನ್ ರಾಗಿಯ ರೋಗ ನಿರೋಧಕತ್ವ, ಮತ್ತು ಬರ ಸಹಿಷ್ಣುತೆಗಳನ್ನು ಗಮನಿಸಿ, ವಿವಿಧೆಡೆಯ ತಳಿಗಳನ್ನು ಕಲೆಹಾಕಿ, ಅವನ್ನು ತಿದ್ದಲು ಮಾಡಿದ ಪ್ರಯತ್ನಗಳು ಹೆಚ್ಚು ಫಲಕಾರಿಯಾಗಲಿಲ್ಲ. ರಾಗ ಸ್ವಭಾವತಃ ಸ್ವಕೀಯ ಪರಾಗಸ್ಪರ್ಶದ ಬೆಳೆ. ಅಸಂಖ್ಯ ಸೂಕ್ಷ್ಮ ಹೂಗಳಿಂದ ಅದರ ತೆನೆಗಳು ಗಾಳಿಯಲ್ಲಿ ತೊನೆದಾಡುತ್ತವೆ. ಅಯ್ಯಂಗಾರ್ ಎಂಬ ಸಂಶೋಧನಕರ್ತರು ೧೯೩೪ ರ ವಿಧಾನ,ಸಂಪರ್ಕ ಸಂಕರಣಾವಿಧಾನ[ಕಾಂಟಾಕ್ಟ್ ಮೆಥಡ್] ಸ್ವಲ್ಪಮಟ್ಟಿಗೆ ಸರಿಯಾಗಿದೆ .ಈ ವಿಧಾನದಲ್ಲಿ ವಿಭಿನ್ನ ಗುಣಗಳುಳ್ಳ ಎರಡು ಭಿನ್ನ ತಳಿಗಳನ್ನು ಒಟ್ಟೊಟ್ಟಿಗೆ ಬೆಳೆದು ಅವುಗಳ ತೆನೆಗಳನ್ನು, ಹೂ ಬಿಡುವ ಸಮಯದಲ್ಲಿ ಒಟ್ಟಾಗಿ ಸೇರಿಸಿ ಕಟ್ಟಿ, ಅವನ್ನು ಪಾಲಿಥೀನ್ ಕವರಿನಿಂದು ಮುಚ್ಚುತ್ತಾರೆ. ಈ ಸಂಪರ್ಕ ಸಾಮೀಪ್ಯದಲ್ಲಿ ಕನಿಷ್ಠ ಕೆಲವು ಹೂಗಳಲ್ಲಾದರೂ ಪರಕೀಯ ಪರಾಗಸ್ಪರ್ಶವೇರ್ಪಟ್ಟು ಅವು ಸಂಕರ ಬೀಜ[ಹೈಬ್ರಿಡ್] ನೀಡುತ್ತವೆ.೧೯೫೧ ರಿಂದ ೧೯೬೪ ರ ಹೊತ್ತಿಗೆ, ಆಜ್ಯದ ವಿವಿಧ ಹವಾಗುಳಗಳಿಗೆ ಒಗ್ಗುವಂತಹ ’ಅರುಣ’, ಉದಯ, ಪೂರ್ಣ, ಅನ್ನಪೂರ್ಣ, ಕಾವೇರಿ,ಮತ್ತು ಶಕ್ತಿ ತಳಿಗಳು ತಯಾರಾದವು.


ಇಂಡಿಯ ಮತ್ತು ಆಫ್ರಿಕಾದೇಶದ ತಳಿಗಳ ಸಮ್ಮಿಳನದಿಂದ ತಯಾರಾದ ತಳಿಗಳನ್ನು ’ಇಂಡಾಫ್’ ಎನ್ನುತ್ತಾರೆ.ಒಣಬೇಸಾಯದ ವ್ಯವಸ್ಥೆಗೆ, ಇಂಡಾಫ್-೧, ೩, ೮ ನ್ನು ಶಿಫಾರಸ್ ಮಾಡಲಾಯಿತು. ಮುಂಗಾರು ತಡವಾದಾಗ, ಇಂಡಾಫ್-೫ ಬೇಸಿಗೆಗೆ ಉತ್ತಮವೆನ್ನಿಸಿತು.