ಬಿ.ಕೆ.ಸುಮಿತ್ರಾ
From Wikipedia
ಕನ್ನಡ ಚಿತ್ರರಂಗದ ಪ್ರಮುಖ ಹಿನ್ನೆಲೆ ಗಾಯಕಿಯರಲ್ಲಿ ಬಿ.ಕೆ.ಸುಮಿತ್ರಾ ಒಬ್ಬರು.ಸಂಗೀತದ ಎಲ್ಲ ಪ್ರಕಾರಗಳಲ್ಲೂ ಹಾಡಿರುವ ಹೆಗ್ಗಳಿಕೆ ಇವರದು.ಬಿ.ಕೆ.ಸುಮಿತ್ರಾ ಹುಟ್ಟಿದ್ದು ಜುಲೈ ೧,೧೯೪೬ ರಂದು ಚಿಕ್ಕಮಗಳೂರು ಜಿಲ್ಲೆಯ ಬಿಳಿಲುಕೊಪ್ಪ ಗ್ರಾಮದಲ್ಲಿ.ತಂದೆ ಪಟೇಲ್ ಕೃಷ್ಣಯ್ಯ,ತಾಯಿ ಗಂಗಮ್ಮ.ಓದಿದ್ದು ಬಿಎಸ್ಸಿ,ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ.ಕಾಲೇಜಿನಲ್ಲಿ ಓದುತ್ತಿದ್ದಾಗ ರೇಡಿಯೋದಲ್ಲಿ ಬರುತ್ತಿದ್ದ ಗೀತೆಗಳನ್ನು ಕೇಳಿ ಸಂಗೀತಾಭ್ಯಾಸ ಶುರು.ಜಾನಪದಗೀತೆ,ಭಕ್ತಿಗೀತೆ,ಭಾವಗೀತೆ ಮೊದಲಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.ಮುಂದಿನ ದಿನಗಳಲ್ಲಿ ಕುವೆಂಪು,ದ.ರಾ.ಬೇಂದ್ರೆ,ಜಿ.ಎಸ್.ಶಿವರುದ್ರಪ್ಪ...ಮೊದಲಾದ ಕವಿಗಳ ಕವಿತೆಗಳನ್ನು ಆಕಾಶವಾಣಿ,ದೂರದರ್ಶನ,ಧ್ವನಿಸುರುಳಿ,ಸಿ.ಡಿ.ಗಳಿಗಾಗಿ ಹಾಡಿದರು.ದೇಶ-ವಿದೇಶಗಳಲ್ಲಿ ಅನೇಕ ಕನ್ನಡಕೂಟಗಳಿಗಾಗಿ ಸುಗಮ ಸಂಗೀತ ಕಾರ್ಯಕ್ರಮ ನಡೆಸಿ ಕೊಟ್ಟಿದ್ದಾರೆ.
ಜಿ.ಕೆ.ವೆಂಕಟೇಶ್ ರವರ ಸಂಗೀತ ನಿರ್ದೇಶನದ ಕವಲೆರಡು ಕುಲವೊಂದು ಚಿತ್ರದಿಂದ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದರು.ಹೆಚ್.ಎಂ.ವಿ.,ಸಿ.ಬಿ.ಎಸ್.,ಸಂಗೀತ.,ಲಹರಿ ಮುಂತಾದ ಧ್ವನಿಸುರುಳಿ ಸಂಸ್ಥೆಗಳಿಗೆ ಹಾಡಿದ್ದಾರೆ.ಉದುಪಿಯ ಕೃಷ್ಣ,ಧರ್ಮಸ್ಥಳದ ಮಂಜುನಾಥ,ಎಡೆಯೂರು ಸಿದ್ಧಲಿಂಗೇಶ್ವರ..ಮುಂತಾದ ಭಕ್ತಿಗೀತೆಗಳನ್ನು ಹಾಡಿದ್ದಾರೆ.ಪತಿ ಸುಧಾಕರ್.ಮಗಳು ಸೌಮ್ಯ ಖ್ಯಾತ ಬಾಲಿವುಡ್ ಗಾಯಕಿ.ಮಗ ಸುನೀಲ್ರಾವ್ ಕನ್ನಡದ ಉದಯೋನ್ಮುಖ ಚಿತ್ರನಟ.
[ಬದಲಾಯಿಸಿ] ಇವರು ಹಾಡಿರುವ ಕೆಲವು ಪ್ರಸಿದ್ಧ ಹಾಡುಗಳು
- ಸಂಪಿಗೆ ಮರದ ಹಸಿರೆಲೆ ನಡುವೆ.... - ಉಪಾಸನೆ
[ಬದಲಾಯಿಸಿ] ಪ್ರಶಸ್ತಿಗಳು
- ಲಾವಣ್ಯ ಲೇಖಕರ ಬಳಗದಿಂದ ಗಾನಕೋಗಿಲೆ ಪ್ರಶಸ್ತಿ.
- ಕೆಂಪೇಗೌಡ ಪ್ರಶಸ್ತಿ.
- ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ.
- ರಾಜ್ಯೋತ್ಸವ ಪ್ರಶಸ್ತಿ.