ದೊಡ್ಡರಂಗೇಗೌಡ

From Wikipedia

ದೊಡ್ಡರಂಗೇಗೌಡ

ದೊಡ್ಡರಂಗೇಗೌಡ - ಕನ್ನಡದ ಕವಿಗಳಲ್ಲೊಬ್ಬರು ಮತ್ತು ಚಿತ್ರಸಾಹಿತಿಗಳಲ್ಲೊಬ್ಬರು.

ತುಮಕೂರು ಜಿಲ್ಲೆಯ ಕುರುಬರಹಳ್ಳಿಯಲ್ಲಿ ೧೯೪೫ರಲ್ಲಿ ಜನಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಇವರು, ನಂತರ ಕನ್ನಡದಲ್ಲಿ ನವೋದಯ ಸಾಹಿತ್ಯದ ಬಗ್ಗೆ ಸಂಶೋಧನೆ ನಡೆಸಿದರು. ಇವರ ಈ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ ಪಿಹೆಚ್‍ಡಿ(ಡಾಕ್ಟರೇಟ್) ಪದವಿ ದೊರಕಿತು.

೧೯೭೨ರಿಂದ ೨೦೦೪ರವರೆಗೂ ಬೆಂಗಳೂರಿನ ಕೃಷ್ಣರಾಜೇಂದ್ರ ಮಾರುಕಟ್ಟೆ ಬಳಿ ಇರುವ ಎಸ್.ಎಲ್.ಎನ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ.

ಪರಿವಿಡಿ

[ಬದಲಾಯಿಸಿ] ಸಾಹಿತ್ಯ ಕೃತಿಗಳು

  • ಕನ್ನಡದಲ್ಲಿ ನವೋದಯ ಸಾಹಿತ್ಯ (ಸಂಶೋಧನಾ ಗ್ರಂಥ)
  • ರಾಗ ರಂಗು (ಪುಸ್ತಕ)

[ಬದಲಾಯಿಸಿ] ಕಾರ್ಯ ನಿರ್ವಹಿಸಿದ ಹುದ್ದೆಗಳು

  • ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ
  • ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ

[ಬದಲಾಯಿಸಿ] ದೊಡ್ಡರಂಗೇಗೌಡ ಗೀತಸಾಹಿತ್ಯ ಒದಗಿಸಿರುವ ಕೆಲವು ಚಲನಚಿತ್ರಗಳು

ದೊಡ್ಡರಂಗೇಗೌಡ
ದೊಡ್ಡರಂಗೇಗೌಡ

[ಬದಲಾಯಿಸಿ] ದೊಡ್ಡರಂಗೇಗೌಡ ಗೀತಸಾಹಿತ್ಯ ಒದಗಿಸಿರುವ ಕೆಲವು ಭಾವಗೀತೆ ಆಲ್ಬಂಗಳು

  • ಮಾವು-ಬೇವು
  • ಭೂಮಿ-ಬಾನು
  • ಪ್ರಾಯ ಮೂಡಿತು