ಗಂಗಾಧರ ಚಿತ್ತಾಲ

From Wikipedia

ಗಂಗಾಧರ ಚಿತ್ತಾಲರು ನವೋದಯ ಕಾಲದ ಪ್ರಮುಖ ಕವಿಗಳು. ಇವರು ಉತ್ತರ ಕನ್ನಡ ಜಿಲ್ಲೆಯ ಹನೇಹಳ್ಳಿಯಲ್ಲಿ ೧೯೨೩ ನವ್ಹಂಬರ ೧೨ರಂದು ಜನಿಸಿದರು. ಕನ್ನಡದ ಮತ್ತೋರ್ವ ಖ್ಯಾತ ಲೇಖಕ ಯಶವಂತ ಚಿತ್ತಾಲರು ಇವರ ಅಣ್ಣಂದಿರು.


ಪರಿವಿಡಿ

[ಬದಲಾಯಿಸಿ] ಶಿಕ್ಷಣ

೧೯೪೦ರಲ್ಲಿ ಧಾರವಾಡದ ಕರ್ನಾಟಕ ಹಾಯ್ ಸ್ಕೂಲಿನಿಂದ ಮ್ಯಾಟ್ರಿಕ್ಯುಲೇಶನ್ ಪರೀಕ್ಷೆಗೆ ಕುಳಿತ ಚಿತ್ತಾಲರು ಮುಂಬಯಿ ವಿಶ್ವವಿದ್ಯಾಲಯಕ್ಕೆ ಹೊಸ ವಿಕ್ರಮ ಸ್ಥಾಪಿಸಿ, ಪ್ರಥಮ ಸ್ಥಾನ ಪಡೆದರು.

೧೯೪೨ರಲ್ಲಿ ಸ್ವಾತಂತ್ರ್ಯ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾಲೇಜಿನಿಂದ ಡಿಬಾರ್ ಆದರು. ಕಾಲೇಜು ಶಿಕ್ಷಣವನ್ನು ಮುಂದುವರಿಸಿದಾಗಲೂ ಕೂಡ ಎಂ.ಎನ್.ರಾಯ್ ಅವರ ಪಕ್ಷದೊಂದಿಗೆ ಸಂಬಂಧವಿಟ್ಟುಕೊಂಡ ಚಿತ್ತಾಳರು , ವಿದ್ಯಾರ್ಥಿ ಯೂನಿಯನ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ೧೯೪೫ರಲ್ಲಿ ಇಂಗ್ಲಿಷ್ ಸಾಹಿತ್ಯವನ್ನು ಮುಖ್ಯ ವಿಷಯವಾಗಿ ತೆಗೆದುಕೊಂಡು, ಮುಂಬಯಿ ವಿಶ್ವವಿದ್ಯಾಲಯದ ಬಿ.ಎ. (ಆನರ್ಸ್) ಪದವಿ ಪಡೆದರು.


[ಬದಲಾಯಿಸಿ] ವೃತ್ತಿ

೧೯೪೮ರಲ್ಲಿ ಐ.ಎಸ್. ಮತ್ತು ಎ.ಎಸ್. ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ , ಮುಂಬಯಿಯಲ್ಲಿ ಸಹಾಯಕ ಮಹಾಲೇಖಪಾಲಕರಾಗಿ ನೇಮಕಗೊಂಡರು.

೧೯೫೫-೧೯೫೮ರ ಕಾಲಾವಧಿಯಲ್ಲಿ ವಾಷಿಂಗ್ಟನ್ ದಲ್ಲಿ ಡೆಪ್ಯುಟಿ ಡೈರೆಕ್ಟರ್ ಆಫ್ ಆಡಿಟ್ಸ್ ಆಗಿ ಕಾರ್ಯ ನಿರ್ವಹಿಸಿದರು.

೧೯೬೬-೧೯೬೭ರ ಕಾಲಾವಧಿಯಲ್ಲಿ ಲಂಡನ್ದಲ್ಲಿ ಡೈರೆಕ್ಟರ್ ಆಫ್ ಆಡಿಟ್ಸ್ ಆಗಿ ಸೇವೆ ಸಲ್ಲಿಸಿದರು

ಗಂಗಾಧರ ಚಿತ್ತಾಲರು ೧೯೭೭ರಲ್ಲಿ ನಿವೃತ್ತರಾದರು ; ೧೯೮೭ರಲ್ಲಿ ನಿಧನರಾದರು.

[ಬದಲಾಯಿಸಿ] ಕೃತಿಗಳು

[ಬದಲಾಯಿಸಿ] ಕವನ ಸಂಕಲನ

  • ಕಾಲದ ಕರೆ
  • ಮನುಕುಲದ ಹಾಡು
  • ಹರಿವ ನೀರಿದು
  • ಸಂಪರ್ಕ
  • ಸಮಗ್ರ ಕಾವ್ಯ

[ಬದಲಾಯಿಸಿ] ಪುರಸ್ಕಾರ

೧೯೮೨ರಲ್ಲಿ ಗಂಗಾಧರ ಚಿತ್ತಾಲರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತು.