ಎಂ.ಎಂ.ಕಲಬುರ್ಗಿ

From Wikipedia

ಮಲ್ಲೇಶಪ್ಪ ಕಲಬುರ್ಗಿಯವರು ೧೯೩೮ ನವಂಬರ ೨೮ರಂದು ವಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ಲ ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಗುರಮ್ಮ; ತಂದೆ ಮಡಿವಾಳಪ್ಪ.


ಪರಿವಿಡಿ

[ಬದಲಾಯಿಸಿ] ಶಿಕ್ಷಣ

ಕಲಬುರ್ಗಿಯವರ ಪ್ರಾಥಮಿಕ ಶಿಕ್ಷಣ ಯರಗಲ್ಲಿನಲ್ಲಿ, ಮಾಧ್ಯಮಿಕ ಶಿಕ್ಷಣ ಸಿಂದಗಿಯಲ್ಲಿ ಜರುಗಿತು. ವಿಜಾಪುರದಲ್ಲಿ ಬಿ.ಎ. ಪದವಿಯನ್ನು ಪಡೆದ ಬಳಿಕ, ೧೯೬೨ರಲ್ಲಿ ಧಾರವಾಡಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು.


[ಬದಲಾಯಿಸಿ] ವೃತ್ತಿಜೀವನ

೧೯೬೨ರಲ್ಲಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬೋಧಕರಾಗಿ ಸೇವೆ ಪ್ರಾರಂಭಿಸಿದ ಕಲಬುರ್ಗಿಯವರು, ೧೯೬೬ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾದರು. ೧೯೮೨ರಲ್ಲಿ ಅಲ್ಲಿಯೆ ವಿಭಾಗ ಮುಖ್ಯಸ್ಥರಾದರು. ಹಂಪಿಯಲ್ಲಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿ ಅಮೂಲ್ಯ ಸೇವೆ ಸಲ್ಲಿಸಿ ನಿವೃತ್ತರಾದರು.


[ಬದಲಾಯಿಸಿ] ಸಂಶೋಧನ ಕ್ಷೇತ್ರ

ಡಾ| ಎಂ.ಎಂ.ಕಲಬುರ್ಗಿಯವರು ಸಾಹಿತ್ಯ, ಸಂಸ್ಕೃತಿ, ಜಾನಪದ, ಶಾಸನ, ಇತಿಹಾಸ, ಹಸ್ತಪ್ರತಿಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಸಂಶೋಧನೆಗಳನ್ನು ಮಾಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಜಾನಪದ ಸಮ್ಮೇಲನವನ್ನು ರೂಪಿಸಿದವರಲ್ಲಿ ಒಬ್ಬರು. ಕನ್ನಡ ವಿಶ್ವವಿದ್ಯಾಲಯದಲ್ಲಿ ದೇಸಿ ಸಮ್ಮೇಲನವನ್ನು ಸ್ಥಾಪಿಸಿದವರು ಡಾ| ಕಲಬುರ್ಗಿ. ಗದಗಿನ ಶ್ರೀ ತೋಂಟದಾರ್ಯ ಮಠದ ವೀರಶೈವ ಅಧ್ಯಯನ ಸಂಸ್ಥೆಯ ಸಂಸ್ಥಾಪಕರು. ಇದಲ್ಲದೆ ಮೈಸೂರಿನ ಸುತ್ತೂರು ಮಠದ ಸಮಗ್ರ ವಚನ ಸಾಹಿತ್ಯ ಪ್ರಕಟಣಮಾಲೆಯ , ಬೆಳಗಾವಿಯ ನಾಗನೂರು ಮಠದ ವೀರಶೈವ ಅಧ್ಯಯನ ಅಕಾಡೆಮಿಯ ಹಾಗು ಶಿವಮೊಗ್ಗೆಯ ಆನಂದಪುರ ಮಠದ ಮಲೆನಾಡು ವೀರಶೈವ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.


[ಬದಲಾಯಿಸಿ] ಗೌರವ

ಡಾ| ಎಂ.ಎಂ. ಕಲಬುರ್ಗಿಯವರ ಸೇವೆಯನ್ನು ಅನುಲಕ್ಷಿಸಿ ಅನೇಕ ಗೌರವಗಳು ಅವರಿಗೆ ಸಂದಿವೆ. ತಂಜಾವೂರಿನಲ್ಲಿ ನಡೆದ All India Placename Confernceಕ್ಕೆ ಕಲಬುರ್ಗಿಯವರು ಅಧ್ಯಕ್ಷರಾಗಿದ್ದರು. ಮಹಾಲಿಂಗಪುರದಲ್ಲಿ ನಡೆದ ಅಖಿಲ ಕರ್ನಾಟಕ ಪ್ರಥಮ ಶ್ರೀಕೃಷ್ಣ ಪಾರಿಜಾತ ಸಮ್ಮೇಳನದ ಅಧ್ಯಕ್ಷಪದ ಇವರದಾಗಿತ್ತು.


[ಬದಲಾಯಿಸಿ] ಸಾಹಿತ್ಯ

ಡಾ| ಎಂ.ಎಂ.ಕಲಬುರ್ಗಿಯವರು ಸೃಜನಶೀಲ ಹಾಗು ಸಂಶೋಧನೆ ಈ ಎರಡೂ ಪ್ರಕಾರಗಳಲ್ಲಿ ಎಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.


[ಬದಲಾಯಿಸಿ] ಕವನ

  • ನೀರು ನೀರಡಿಸಿತ್ತು

[ಬದಲಾಯಿಸಿ] ನಾಟಕ

  • ಕೆಟ್ಟಿತ್ತು ಕಲ್ಯಾಣ

[ಬದಲಾಯಿಸಿ] ಸಂಶೋಧನೆ

ಕೆಲವು ಸಂಶೋಧನ ಗ್ರಂಥಗಳು:

  • ಮಾರ್ಗ (೧,೨,೩,೪)
  • ಕನ್ನಡ ಹಸ್ತಪ್ರತಿ ಶಾಸ್ತ್ರ
  • ಕನ್ನಡ ಗ್ರಂಥ ಸಂಪಾದನ ಶಾಸ್ತ್ರ
  • ಕನ್ನಡ ಸಂಶೋಧನ ಶಾಸ್ತ್ರ
  • ಕನ್ನಡ ನಾಮವಿಜ್ಞಾನ
  • ಧಾರವಾಡ ಜಿಲ್ಲೆಯ ಶಾಸನಸೂಚಿ
  • ಮಹಾರಾಷ್ಟ್ರದ ಕನ್ನಡ ಶಾಸನಗಳು
  • ಶಾಸನಗಳಲ್ಲಿ ಶಿವಶರಣರು
  • ಶಬ್ದಮಣಿದರ್ಪಣ ಸಂಗ್ರಹ
  • ಕನ್ನಡ ಕೈಫಿಯತ್ತುಗಳು
  • ಕೆಳದಿ ಸಂಸ್ಥಾನ ಸಮಗ್ರ ಅಧ್ಯಯನ
  • ಸ್ವಾದಿ ಅರಸು ಮನೆತನ
  • ಸಾರಂಗಶ್ರೀ

[ಬದಲಾಯಿಸಿ] ಸಂಪಾದನೆ

ಕನ್ನಡ ವಿಶ್ವವಿದ್ಯಾಲಯದ ಮೂಲಕ (೧)ಶಿವಶರಣರ ಸಮಗ್ರ ವಚನ ಸಂಪುಟಗಳನ್ನು ಹಾಗು (೨)ಹರಿದಾಸರ ಸಮಗ್ರ ಕೀರ್ತನ ಸಂಪುಟಗಳನ್ನು ಪ್ರಕಟಗೊಳಿಸಿದ್ದಾರೆ.

[ಬದಲಾಯಿಸಿ] ಪ್ರಶಸ್ತಿ

  • ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜಾನಪದ ಪ್ರಶಸ್ತಿ
  • ಆರು ಪುಸ್ತಕಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ
  • ರಾಜ್ಯೋತ್ಸವ ಪ್ರಶಸ್ತಿ
  • ಪಂಪ ಪ್ರಶಸ್ತಿ
  • ವರ್ಧಮಾನ ಪ್ರಶಸ್ತಿ
  • ವಿಶ್ವಮಾನವ ಪ್ರಶಸ್ತಿ
  • ೨೦೦೬ನೆಯ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ