ರಾಷ್ಟ್ರಕೂಟ

From Wikipedia

ರಾಷ್ಟ್ರಕೂಟ ಸಾಮ್ರಾಜ್ಯ

ಧ್ರುವ ಧಾರಾವರ್ಷನ ಸಮಯದಲ್ಲಿ ರಾಷ್ಟ್ರಕೂಟ ಸಾಮ್ರಾಜ್ಯದ ವಿಸ್ತಾರ (ಕ್ರಿ.ಶ. ೭೮೦)
ಅಧಿಕೃತ ಭಾಷೆಗಳು ಕನ್ನಡ
ಸಂಸ್ಕೃತ
ರಾಜಧಾನಿಗಳು ಮಯೂರಖಂಡ (ಬೀದರ್ ಜಿಲ್ಲೆ), ಮಾನ್ಯಖೇತ
ಸರಕಾರ ಚಕ್ರಾಧಿಪತ್ಯ
ಮುಂಚಿನ ಆಡಳಿತ ಬಾದಾಮಿ ಚಾಲುಕ್ಯರು
ನಂತರದ ಆಡಳಿತ ಪಶ್ಚಿಮ ಚಾಲುಕ್ಯರು

ರಾಷ್ಟ್ರಕೂಟರು ಕ್ರಿ.ಶ. ೮ ರಿಂದ ೧೦ನೇ ಶತಮಾನದವರೆಗೆ ದಖ್ಖನವನ್ನು ಆಳಿದ ರಾಜವಂಶ. ದಂತಿದುರ್ಗನಿಂದ ಮೊದಲುಗೊಂಡ ಇವರ ಮೂಲಸ್ಥಾನ ಲಟ್ಟಲೂರು ಆಗಿದ್ದು, ತದನಂತರ ತಮ್ಮ ರಾಜಧಾನಿ ಮಾನ್ಯಖೇಟದಿಂದ ಆಳ್ವಿಕೆ ನಡೆಸಿದರು.

[ಬದಲಾಯಿಸಿ] ಸಾಹಿತ್ಯ ಮತ್ತು ಸಂಸ್ಕೃತಿ

ರಾಷ್ಟ್ರಕೂಟ ಅರಸರು (753-982)
ದಂತಿದುರ್ಗ (735 - 756)
ಮೊದಲನೇ ಕೃಷ್ಣ (756 - 774)
ಇಮ್ಮಡಿ ಗೋವಿಂದ (774 - 780)
ಧ್ರುವ ಧಾರಾವರ್ಷ (780 - 793)
ಮುಮ್ಮಡಿ ಗೋವಿಂದ (793 - 814)
ಮೊದಲನೇ ಅಮೋಘವರ್ಷ (814 - 878)
ಇಮ್ಮಡಿ ಕೃಷ್ಣ (878 - 914)
ಮುಮ್ಮಡಿ ಇಂದ್ರ (914 -929)
ಇಮ್ಮಡಿ ಅಮೋಘವರ್ಷ (929 - 930)
ನಾಲ್ವಡಿ ಗೋವಿಂದ (930 – 936)
ಮುಮ್ಮಡಿ ಅಮೋಘವರ್ಷ (936 – 939)
ಮುಮ್ಮಡಿ ಕೃಷ್ಣ (939 – 967)
ಕೊಟ್ಟಿಗ ಅಮೋಘವರ್ಷ (967 – 972)
ಇಮ್ಮಡಿ ಕರ್ಕ (972 – 973)
ನಾಲ್ವಡಿ ಇಂದ್ರ (973 – 982)
ಇಮ್ಮಡಿ ತೈಲಪ
(ಪಶ್ಚಿಮ ಚಾಲುಕ್ಯರು)
(973-997)

ರಾಷ್ಟ್ರಕೂಟರ ಕಾಲದಲ್ಲಿ ಕನ್ನಡದಲ್ಲಿ ಹಲವಾರು ರೀತಿಯ ರಚನೆಗಳು ಇದ್ದವೆಂದು ತಿಳಿದು ಬರುವುದು. ಬದಂಡೆ, ಚತ್ರಾಣ, ಮುಂತಾದ ಕಾವ್ಯಭೇದಗಳಿದ್ದವು. ಪ್ರಾಂತದ ಭಾಷೆ ತಿರುಳುಗನ್ನಡವೆಂದು ಹೆಸರು ಪಡೆದಿತ್ತು. ಆ ಸಮಯದಲ್ಲಿ ಮತ್ತು ನೃಪತುಂಗನಿಗಿಂತಲು ಹಿಂದೆ ಅನೇಕ ಕವಿಗಳಿದ್ದರೆಂದು ರಾಜಾ ನೃಪತುಂಗನು ತನ್ನ ’’ಕವಿರಾಜಮಾರ್ಗ’’ ಕೃತಿಯಲ್ಲಿ ತಿಳಿಸಿದ್ದಾನೆ. ರಾಮಾಯಣ, ಮಹಾಭಾರತಗಳ ಸಂಕ್ಷಿಪ್ತ ಕನ್ನಡರೂಪ ಲಭ್ಯವಾಗಿದ್ದವು. ೫ ನೇ ಶತಮಾನದ ಕನ್ನಡದ ಶಾಸನದ ನಂತರದಲ್ಲಿ ಪ್ರಥಮವಾಗಿ ರಚಿತವಾಗಿರುವ ಕವಿರಾಜಮಾರ್ಗದಲ್ಲಿ ಕಾವೇರಿಯಿಂದ ಗೋದಾವರಿಯವರೆಗೆ ಇದ್ದ ನಾಡು ಕನ್ನಡನಾಡು ಎಂದು ತಿಳಿಸಲಾಗಿದೆ. ಆ ಸಮಯದಲ್ಲಿ ಹಲವಾರು ಜೈನ ಕವಿಗಳಿದ್ದರು. ಶಿವಕೋಟಿ ಆಚಾರ್ಯನ ‘’ವಡ್ಡಾರಾಧನೆ’’ ಮೊದಲ ಗದ್ಯಕೃತಿ ರಚಿತವಾಗಿತ್ತು.

ಇತರ ಭಾಷೆಗಳು