ಕೆ.ಎಸ್.ನಿಸಾರ್ ಅಹಮದ್

From Wikipedia

ಪ್ರೊ. ಕೆ.ಎಸ್. ನಿಸಾರ್ ಅಹಮದ್
ಪ್ರೊ. ಕೆ.ಎಸ್. ನಿಸಾರ್ ಅಹಮದ್

ಪ್ರೊಫೆಸರ್ ಕೆ.ಎಸ್.ನಿಸಾರ್ ಅಹಮದ್ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು.

ಪರಿವಿಡಿ

[ಬದಲಾಯಿಸಿ] ಜೀವನ

ನಿಸಾರ್ ಅಹಮದ್ ಅವರು ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೨,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.

[ಬದಲಾಯಿಸಿ] ಸಾಹಿತ್ಯ

ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ ೧೦ನೇ ವಯಸ್ಸಿನಲ್ಲೇ ಆರಂಭ.'ಜಲಪಾತ'ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು.ಅವರು ಇಲ್ಲಿಯವರೆಗೆ ಸುಮಾರು ೫ ದಶಕಗಳಿಂದ ೨೫ ಕೃತಿಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ಪ್ರಸಿದ್ಧ ಕವನ ಸಂಕಲನಗಳಾಗಿವೆ. ೧೯೭೮ರಲ್ಲಿ ಇವರ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ನಿತ್ಯೋತ್ಸವ ಹೊರಬಂದಿತು ಹಾಗೂ ಕನ್ನಡ ಲಘುಸಂಗೀತ ಕ್ಷೇತ್ರದಲ್ಲಿ ಭರ್ಜರಿ ಯಶಸ್ಸು ಪಡೆಯಿತು.

ನಿಸಾರ್‍ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ.ಇವರ ಕುರಿಗಳು ಸಾರ್‍ ಕುರಿಗಳು,ಭಾರತವು ನಮ್ಮ ದೇಶ (ಸರ್‍ ಮೊಹಮದ್ ಇಕ್ಬಾಲ್ ಅವರ ಸಾರೆ ಜಹಾಂ ಸೆ ಅಚ್ಚಾ ಕವನದ ಭಾಷಾಂತರ) ಹಾಗೂ ಬೆಣ್ಣೆ ಕದ್ದ ನಮ್ಮ ಕೃಷ್ಣ ಕವನಗಳು ಕವಿಯ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿವೆ. .

[ಬದಲಾಯಿಸಿ] ಕೃತಿಗಳು

[ಬದಲಾಯಿಸಿ] ಕವನ ಸಂಕಲನಗಳು

  • ಮನಸು ಗಾಂಧಿಬಜಾರು
  • ನಿತ್ಯೋತ್ಸವ
  • ನೆನದವರ ಮನದಲ್ಲಿ
  • ನಾನೆಂಬ ಪರಕೀಯ
  • ಅನಾಮಿಕ ಆಂಗ್ಲರು
  • ಸುಮಹೂರ್ತ
  • ಸಂಜೆ ಐದರ ಮಳೆ
  • ಸ್ವಯಂ ಸೇವೆಯ ಗಿಳಿಗಳು

[ಬದಲಾಯಿಸಿ] ಗದ್ಯ ಸಾಹಿತ್ಯ

  • ಅಚ್ಚುಮೆಚ್ಚು
  • ಇದು ಬರಿ ಬೆಡಗಲ್ಲೊ ಅಣ್ಣ

ಷೇಕ್ಸ್ ಪಿಯರ್‍ನ 'ಒಥೆಲ್ಲೊ' ಹಾಗೂ 'ಎ ಮಿಡ್ ಸಮ್ಮರ್ ನೈಟ್ಸ್ ಡ್ರೀಮ್' ಕೃತಿಗಳನ್ನು ಕನ್ನಡಕ್ಕೆ ಭಾಷಾಂತರಿಸಿದ್ದಾರೆ

[ಬದಲಾಯಿಸಿ] ಪ್ರಶಸ್ತಿ ಪುರಸ್ಕಾರಗಳು

  • ೨೦೦೬ರ ಮಾಸ್ತಿಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
  • ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
  • ಗೊರೂರು ಪ್ರಶಸ್ತಿ
  • ಅನಕೃ ಪ್ರಶಸ್ತಿ
  • ಕೆಂಪೇಗೌಡ ಪ್ರಶಸ್ತಿ
  • ಪಂಪ ಪ್ರಶಸ್ತಿ
  • ರಾಜ್ಯೋತ್ಸವ ಪ್ರಶಸ್ತಿ ೧೯೮೧
  • ನಾಡೋಜಪ್ರಶಸ್ತಿ ೨೦೦೩
  • ೨೦೦೬ ನೇ ಸಾಲಿನ ಅರಸು ಪ್ರಶಸ್ತಿ
  • ೨೦೦೬ ಡಿಸೆಂಬರ್‍ನಲ್ಲಿ ಶಿವಮೊಗ್ಗದಲ್ಲಿ ನಡೆಯುವ ೭೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.