ಸರೋಜಿನಿ ಮಹಿಷಿ

From Wikipedia

ಸರೋಜಿನಿ ಮಹಿಷಿಯವರು ಧಾರವಾಡದವರು. ಮಹಿಳೆಯರ ಏಳಿಗೆಗಾಗಿ ವನಿತಾ ಸೇವಾ ಸಮಾಜವನ್ನು ಸ್ಥಾಪಿಸಿದವರು. ಹೆಣ್ಣು ಮಕಕ್ಳಿಗಾಗಿಯೆ ಒಂದು ಪ್ರಾಥಮಿಕ ಶಾಲೆ,ಒಂದು ಪ್ರೌಢ ಶಾಲೆ ಮತ್ತು ಒಂದು ತರಬೇತಿ ಕಾಲೇಜನ್ನು ನಡೆಯಿಸುತ್ತಿದ್ದಾರೆ. ಇವರು ವೀರಮಾತಾ ಎನ್ನುವ ಮಾಸಪತ್ರಿಕೆಯ ಸ್ಥಾಪಕ ಸಂಪಾದಕಿಯರಾಗಿದ್ದರು.


ಇವರಿಗೆ ನವಿಲು,ಇಂಚರಎನ್ನುವ ಮಕ್ಕಳ ಸಾಹಿತ್ಯಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗು ಮುಳ್ಳು ಗುಲಾಬಿ ಕವನ ಸಂಕಲನಕ್ಕಾಗಿ ಕರ್ನಾಟಕ ರಾಜ್ಯ ಸರಕಾರದ ಪ್ರಶಸ್ತಿ ದೊರೆತಿದೆ.ಇವರ ಇತರ ಎರಡು ಕವನ ಸಂಕಲನಗಳು:ಸ್ವಾತಂತ್ರ್ಯ ಕಹಳೆ, ಹಿಮಾಚಲದಿಂದ ರಾಮೇಶ್ವರ.


ಸರೋಜಿನಿ ಮಹಿಷಿಯವರು ಕುವೆಂಪುರವರ ಶ್ರೀ ರಾಮಾಯಣ ದರ್ಶನಂ ಕಾವ್ಯವನ್ನು ಹಿಂದಿಗೆ ಅನುವಾದಿಸಿದ್ದಾರೆ. ಶಾಕುಂತಲವನ್ನು ಮರಾಠಿಯಿಂದ ಕನ್ನಡಕ್ಕೆ ಹಾಗು ಡಿ.ವಿ.ಗುಂಡಪ್ಪನವರ ಮಂಕು ತಿಮ್ಮನ ಕಗ್ಗವನ್ನು ಕನ್ನಡದಿಂದ ಹಿಂದಿಗೆ ಅನುವಾದಿಸಿದ್ದಾರೆ.


ಕರ್ನಾಟಕದಲ್ಲಿ ಕನ್ನಡಿಗರಿಗೆ ದೊರೆಯುತ್ತಿದ್ದ ಉದ್ಯೋಗಾವಕಾಶಗಳನ್ನು ಪರಿಶೀಲಿಸಿ ವಿಮರ್ಶಿಸಲು ಕರ್ನಾಟಕ ಸರಕಾರವು ಶ್ರೀಮತಿ ಸರೋಜಿನಿ ಮಹಷಿಯವರಿಗೆ ಕೇಳಿಕೊಂಡಿತ್ತು. ಶ್ರೀಮತಿ ಮಹಿಷಿಯವರು ನೀಡಿದ ವರದಿಯು ಸರೋಜಿನಿ ಮಹಿಷಿ ವರದಿ ಎಂದು ಖ್ಯಾತವಾಗಿದೆ.


ಸರೋಜಿನಿ ಮಹಿಷಿಯವರು ಅನೇಕ ಮಹಿಳಾ ಸಂಘಟನೆಗಳಲ್ಲಿ ಕಾರ್ಯ ಮಾಡಿದ್ದಾರೆ. ಹೆಣ್ಣು ಮಕ್ಕಳ ಗೈಡ್ಸ [1]ಆಂದೋಲನದಲ್ಲಿ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗದ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಹಸ್ತಪ್ರತಿಗಳ ಸಂಗ್ರಹ ಮತ್ತು ಸಂರಕ್ಷಣೆಯ ಯೋಜನೆಯನ್ನು ರೂಪಿಸಿದ್ದಾರೆ.


ಸರೋಜಿನಿ ಮಹಿಷಿಯವರು ಲೋಕಸಭಾ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಹಾಗು ಶ್ರೀ ಚಂದ್ರಶೇಖರರವರ ಸಂಪುಟದಲ್ಲಿ ಭಾರತ ಕೇಂದ್ರ ಮಂತ್ರಿಮಂಡಲದಲ್ಲಿ ರಾಜ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ.


ಸರೋಜಿನಿ ಮಹಿಶಿಯವರಿಗೆ ೨೦೦೬ನೆಯ ಸಾಲಿನ ನಾಡೋಜ ಪ್ರಶಸ್ತಿ ಲಭಿಸಿದೆ.


ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.