ರನ್ನ
From Wikipedia
ರನ್ನನು ಕ್ರಿ.ಶ.೯೪೯ರಲ್ಲಿ ಮುದುವೊಳಲು (ಈಗಿನ ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅತ್ತಿಮಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು.ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು. ಈತನು ನಾಲ್ಕು ಕಾವ್ಯಗಳನ್ನು ರಚಿಸಿದ್ದು ಎರಡು ಕಾವ್ಯಗಳು ಮಾತ್ರ ಲಭ್ಯವಿವೆ:
[ಬದಲಾಯಿಸಿ] ಕೃತಿಗಳು
- ಅಜಿತನಾಥ ಪುರಾಣ ತಿಲಕಮ್
- ಸಾಹಸಭೀಮ ವಿಜಯಂ (ಗದಾಯುದ್ಧ)