ಅಲ್ಲಮ ಪ್ರಭು

From Wikipedia

೧೨ನೆಯ ಶತಮಾನದ ಶಿವಶರಣರಲ್ಲಿ ಅಲ್ಲಮಪ್ರಭು ಉಚ್ಚಸ್ಥಾನದಲ್ಲಿದ್ದಾನೆ. ಈತನು ಅರಸು ಮನೆತನದಲ್ಲಿಯೆ ಹುಟ್ಟಿ ಬೆಳೆದವನಾದರೂ, ಮನೆ ಬಿಟ್ಟು ತೆರಳಿ ಅಧ್ಯಾತ್ಮಸಾಧಕನಾದನೆಂದು ಹೇಳಲಾಗುತ್ತಿದೆ.

ಬಸವಣ್ಣನ ಕಲ್ಯಾಣಕ್ಕೆ ಬಂದ ಅಲ್ಲಮಪ್ರಭು ಅಲ್ಲಿ ಅನುಭವಮಂಟಪದ ಶೂನ್ಯಸಿಂಹಾಸನದ ಅಧ್ಯಕ್ಷನಾಗುತ್ತಾನೆ. ಅಲ್ಲಮನ ವಚನಚಂದ್ರಿಕೆಯಲ್ಲಿ ೧೨೯೪ ವಚನಗಳು ಲಭ್ಯವಾಗಿವೆ. ಅಲ್ಲಮಪ್ರಭು ತನ್ನ ಕೊನೆಯ ದಿನಗಳಲ್ಲಿ ಶ್ರೀಶೈಲ‍ಕ್ಕೆ ಹೋಗಿ ಅಲ್ಲಿಯ ವನದಲ್ಲಿ ಶಿವೈಕ್ಯನಾದನೆಂದು ಪ್ರತೀತಿ ಇದೆ. ಬಸವಣ್ಣನವರ ಸಮಕಾಲೀನನಾದ ಅಲ್ಲಮಪ್ರಭುವಿನ ವಚನಗಳ ಅಂಕಿತ 'ಗುಹೇಶ್ವರ' ಅಥವಾ 'ಗೊಹೇಶ್ವರ'.ಈತನ ವಚನಗಳಲ್ಲಿ ಗಹನವಾದ ಆಧ್ಯಾತ್ಮ ಹಾಗೂ ತಾತ್ವಿಕ ವಿಚಾರಗಳಿವೆ.


ಚಾಮರಸನು ತನ್ನ ಪ್ರಭುಲಿಂಗಲೀಲೆ ಎನ್ನುವ ಕಾವ್ಯದಲ್ಲಿ ಅಲ್ಲಮಪ್ರಭುವಿನ ಐತಿಹ್ಯವನ್ನು ವರ್ಣಿಸಿದ್ದಾನೆ.