ಆನೇಕಲ್

From Wikipedia

ಆನೇಕಲ್ : ಇದು ಬೆಂಗಳೂರು ನಗರ ಜಿಲ್ಲೆಯ ತಾಲೂಕುಗಳಲ್ಲೊಂದು. ಆನೇಕಲ್ ಒಂದು ಪ್ರಮುಖ ಪಟ್ಟಣ ಹಾಗು ತಾಲ್ಲೂಕು ಕೇಂದ್ರ. ಬೆಂಗಳೂರಿನಿಂದ ೩೫ ಕಿ.ಮೀ. ದೂರದಲ್ಲಿರುವ ಆನೇಕಲ್, ತಮಿಳುನಾಡು ಗಡಿಯಿಂದ ಕೇವಲ ೫ ಕಿ.ಮೀ.ದೂರದಲ್ಲಿದೆ. ರೇಷ್ಮೆ ವಸ್ತ್ರ ತಯಾರಿಕೆ ಹೆಸರುವಾಸಿಯಾಗಿರುವ ಆನೇಕಲ್ ತಾಲ್ಲೂಕಿನಲ್ಲಿ ಅನೇಕ ಐತಿಹಾಸಿಕ ಹಾಗು ನೈಸರ್ಗಿಕ ತಾಣಗಳಿವೆ.

ಗಡಿನಾಡು ಪ್ರದೇಶದಲ್ಲಿದರು ತಾಲ್ಲುಕಿನಲ್ಲಿ ಕನ್ನಡಿಗರು ಬಹುಸಂಖ್ಯಾತರಗಿದ್ದಾರೆ. ಆನೇಕಲ್ಲನ್ನು ಕರ್ನಾಟಕದ ರಾಗಿಯ ಕಣಜ ವೆಂದು ಕರೆಯಲಾಗುತ್ತದೆ.


[ಬದಲಾಯಿಸಿ] ಪ್ರೇಕ್ಷಣೀಯ ಸ್ಥಳಗಳು

ಆನೇಕಲ್ ತಾಲ್ಲೂಕಿನ ಪ್ರಮುಖ ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳು

ಬನ್ನೇರುಘಟ್ಟ

ಬನ್ನೇರುಘಟ್ಟ ಬೆಂಗಳೂರು ಹಾಗು ಆನೇಕಲ್ ನಡುವೆ ಎರಡೂ ಸ್ಥಳಗಳಿಂದ ಸುಮಾರು ೨೦ ಕಿ.ಮೀ ದೂರದಲ್ಲಿದೆ. ಬನ್ನೇರುಘಟ್ಟದಲ್ಲಿ ಒಂದು ಸುಂದರ ರಾಷ್ಟೀಯ ಉದ್ಯಾನವವಿದೆ.

ವಿದ್ಯುನ್ಮಾನ ನಗರ (Electronics City)

ಮಾಹಿತಿ ತಂತ್ರಜ್ನಾನ ಹಾಗು ವಿದ್ಯುನ್ಮಾನ ಸಂಸ್ಥೆಗಳ ಕಚೇರಿಗಳಿರುವ ವಿದ್ಯುನ್ಮಾನ ನಗರ (Electronics City) ಆನೇಕಲ್ ನಿಂದ ೨೦ ಕಿ.ಮೀ ದೂರದಲ್ಲಿದೆ.

ಮುತ್ಯಾಲಮಡುವು

ಆನೇಕಲ್ ನಿಂದ ೫ ಕಿ.ಮೀ ದೂರದಲ್ಲಿರುವ ಮುತ್ಯಾಲಮಡುವಿನಲ್ಲಿ ಸುಂದರ ಜಲಪಾತವಿದೆ ಹಾಗು ಇದು ಒಂದು ಪ್ರಸಿದ್ದ ಪ್ರವಾಸಿ ತಾಣವಾಗಿದೆ.

ಆನೇಕಲ್ ಪಟ್ಟಣದ ಪ್ರಮುಖ ಪ್ರೇಕ್ಷಣೀಯ ಸ್ಧಳಗಳು

ಇತಿಹಾಸ ಪ್ರಸಿದ್ಧ ಕಂಬದ ಗಣಪತಿ
Enlarge
ಇತಿಹಾಸ ಪ್ರಸಿದ್ಧ ಕಂಬದ ಗಣಪತಿ

ಕಂಬದ ಗಣಪತಿ ದೇವಾಲಯ

ಶ್ರೀ ತಿಮ್ಮರಾಯಸ್ವಾಮಿ ದೇವಾಲಯ

ಶ್ರೀ ಚನ್ನಕೇಶವ ದೇವಾಲಯ

ಶಂಕರ ಮಠ : ಇಲ್ಲಿನ ಅಮೃತ ಶಿಲೆಯ ಶ್ರೀ ಶಂಕರಾಚಾರ್ಯ ಹಾಗು ಶ್ರೀ ಶಾರದಾ ದೇವಿಯ ವಿಗ್ರಹಗಳು ಐತಿಹಾಸಿಕ ಮಹತ್ವ ಪಡೆದಿದೆ.

ಇತರ ಭಾಷೆಗಳು