ದ.ರಾ.ಬೇಂದ್ರೆ

From Wikipedia

ಶ್ರೀ ದತ್ತಾತ್ರೇಯ ರಾಮಚಂದ್ರ ಬೇಂದ್ರೆ
ಶ್ರೀ ದತ್ತಾತ್ರೇಯ ರಾಮಚಂದ್ರ ಬೇಂದ್ರೆ

"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.


ಪರಿವಿಡಿ

[ಬದಲಾಯಿಸಿ] ಜೀವನ

ಬೇಂದ್ರೆ ೧೮೯೬ನೆಯ ಇಸವಿ ಜನವರಿ ೩೧ ರಂದು ಜನಿಸಿದರು. ತಂದೆ ರಾಮಚಂದ್ರ ಭಟ್ಟ, ತಾಯಿ ಅಂಬಿಕೆ. ಬೇಂದ್ರೆಯವರ ಕಾವ್ಯನಾಮ ಅಂಬಿಕಾತನಯದತ್ತ.

ಬೇಂದ್ರೆ ಮನೆತನದ ಮೂಲ ಹೆಸರು ಠೋಸರ. ವೈದಿಕ ವೃತ್ತಿಯವರು. ಒಂದು ಕಾಲಕ್ಕೆ ಸಾಂಗ್ಲಿ ಸಂಸ್ಥಾನಕ್ಕೆ ಸೇರಿದ್ದ ಗದಗಪಟ್ಟಣದ ಸಮೀಪದ ಶಿರಹಟ್ಟಿಯಲ್ಲಿ ಬಂದು ನೆಲೆಸಿದರು. ದ.ರಾ.ಬೇಂದ್ರೆ ಹನ್ನೊಂದು ವರ್ಷದವರಿದ್ದಾಗ ಅವರ ತಂದೆ ತೀರಿಕೊಂಡರು. ೧೯೧೩ರಲ್ಲಿ ಮೆಟ್ರಿಕ್ಯುಲೇಶನ್ ಮುಗಿಸಿದ ಬಳಿಕ ಬೇಂದ್ರೆ ಪುಣೆಯ ಕಾಲೇಜಿನಲ್ಲಿ ಓದಿ ೧೯೧೮ರಲ್ಲಿ ಬಿ.ಎ. ಮಾಡಿಕೊಂಡರು. ಹಿಡಿದದ್ದು ಅಧ್ಯಾಪಕ ವೃತ್ತಿ. ೧೯೩೫ರಲ್ಲಿ ಎಮ್.ಎ. ಮಾಡಿಕೊಂಡು ಕೆಲಕಾಲ (೧೯೪೪ - ೧೯೫೬) ಸೊಲ್ಲಾಪುರದ ಡಿ.ಎ.ವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

ಬೇಂದ್ರೆಯವರು ೧೯೧೯ರಂದು ಹುಬ್ಬಳ್ಳಿಯಲ್ಲಿ ಲಕ್ಷ್ಮೀಬಾಯಿಯವರನ್ನು ವಿವಾಹವಾದರು; ಅವರ ಪ್ರಥಮ ಕಾವ್ಯ ಸಂಕಲನ "ಕೃಷ್ಣ ಕುಮಾರಿ"-ಯು ಆಗಲೇ ಪ್ರಕಟಿಸಲ್ಪಟ್ಟಿತ್ತು.

ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ. ೧೯೮೧ಅಕ್ಟೋಬರ್ನಲ್ಲಿ ತೀರಿಕೊಂಡ ಅವರು ಕವಿಗಳಿಗೆ, ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು.

[ಬದಲಾಯಿಸಿ] ಸಾಹಿತ್ಯ

ಬೇಂದ್ರೆ ಸ್ಮಾರಕ, ಧಾರವಾಡ
Enlarge
ಬೇಂದ್ರೆ ಸ್ಮಾರಕ, ಧಾರವಾಡ

ಸಾಹಿತ್ಯ ರಚನೆ ಅವರ ಮೊದಲ ಒಲವು. ಕಾಲೇಜಿನಲ್ಲಿ ಓದುತ್ತಿದ್ದಾಗಲೇ ಕವಿತೆಗಳನ್ನು ಕಟ್ಟಿದರು. ೧೯೧೮ರಲ್ಲಿ ಅವರ ಮೊದಲ ಕವನ "ಪ್ರಭಾತ" ಎಂಬ ಪತ್ರಿಕೆಯಲ್ಲಿ ಪ್ರಕಟವಾಯಿತು. ಅಲ್ಲಿಂದಾಚೆಗೆ ಅವರು ಕಾವ್ಯ ರಚನೆ ಮಾಡುತ್ತಲೇ ಬ೦ದರು. "ಗರಿ", "ಕಾಮಕಸ್ತೂರಿ", "ಸೂರ್ಯಪಾನ", "ನಾದಲೀಲೆ", "ನಾಕುತಂತಿ" ಮೊದಲಾದ ಕವನ ಸಂಕಲನಗಳನ್ನು ಪ್ರಕಟಿಸಿದರು. ಕವಿತೆಗಳನ್ನಲ್ಲದೆ ನಾಟಕಗಳು, ಸಂಶೋಧನಾತ್ಮಕ ಲೇಖನಗಳು, ವಿಮರ್ಶೆಗಳನ್ನು ಬೇಂದ್ರೆ ಬರೆದಿದ್ದಾರೆ. ೧೯೨೧ರಲ್ಲಿ ಧಾರವಾಡದಲ್ಲಿ ಅವರು ಗೆಳೆಯರೊಡನೆ ಕಟ್ಟಿದ "ಗೆಳೆಯರ ಗುಂಪು" ಸಂಸ್ಥೆ ಅವರ ಸಾಹಿತ್ಯ ಚಟುವಟಿಕೆಗಳಿಗೆ ಇಂಬು ನೀಡಿತು. ಆಗಿನ್ನೂ ಸ್ವಾತಂತ್ರ್ಯ ಚಳುವಳಿ ಬಿಸಿ ಮುಟ್ಟಿದ್ದ ಸಮಯ. ದೇಶಪ್ರೇಮಿಗಳೂ, ದೇಶಭಕ್ತರೂ ಆಗಿದ್ದ ಬೇಂದ್ರೆ ತಾವೂ ಚಳುವಳಿಯಲ್ಲಿ ಭಾಗವಹಿಸಿ ಕೆಲಕಾಲ ಸೆರೆಮನೆವಾಸ ಅನುಭವಿಸಿದರು.

ಉತ್ತಮ ವಾಗ್ಮಿಗಳಾಗಿದ್ದ ಬೇಂದ್ರೆಯವರ ಉಪನ್ಯಾಸಗಳೆಂದರೆ ಜನರಿಗೆ ಹಿಗ್ಗು. ಅವರ ಮಾತೆಲ್ಲ ಕವಿತೆಗಳೋಪಾದಿಯಲ್ಲಿ ಹೊರಹೊಮ್ಮುತ್ತಿದ್ದವು. ಕನ್ನಡದಲ್ಲಿಯೇ ಅಲ್ಲದೆ ಮರಾಠಿ ಭಾಷೆಯಲ್ಲೂ ಬೇಂದ್ರೆ ಕೆಲವು ಕೃತಿಗಳನ್ನು ರಚಿಸಿದರು.

ಆಧ್ಯಾತ್ಮದ ವಿಷಯದಲ್ಲಿ ಅವರು ಒಲವು ಬೆಳೆಸಿಕೊಂಡಿದ್ದರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದ ಅವರು ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಕವಿತೆಗಳ ನಾದಮಾಧುರ್ಯ ಅಪಾರ.

[ಬದಲಾಯಿಸಿ] ಬೇಂದ್ರೆಯವರ ಸಾಹಿತ್ಯ

[ಬದಲಾಯಿಸಿ] ಕಾವ್ಯಸಂಕಲನ

(ಪ್ರಥಮ ಆವೃತ್ತಿಯ ವರ್ಷದೊಂದಿಗೆ)

  • ೧೯೩೪: ಮೂರ್ತಿ ಮತ್ತು ಕಾಮಕಸ್ತೂರಿ;
  • ೧೯೭೩: ಮತ್ತೆ ಶ್ರಾವಣಾ ಬಂತು;
  • ೧೯೭೮: ಚತುರೋಕ್ತಿ ಮತ್ತು ಇತರ ಕವಿತೆಗಳು;
  • ೧೯೮೩: ತಾ ಲೆಕ್ಕಣಕಿ ತಾ ದೌತಿ;


[ಬದಲಾಯಿಸಿ] ವಿಮರ್ಶೆ

೧೯೩೭: ಸಾಹಿತ್ಯ ಮತ್ತು ವಿಮರ್ಶೆ;

೧೯೪೦: ಸಾಹಿತ್ಯಸಂಶೋಧನೆ;

೧೯೪೫: ವಿಚಾರ ಮಂಜರಿ;

೧೯೫೪: ಕವಿ ಲಕ್ಷ್ಮೀಶನ ಜೈಮಿನಿಭಾರತಕ್ಕೆ ಮುನ್ನುಡಿ;

೧೯೫೯: ಮಹಾರಾಷ್ಟ್ರ ಸಾಹಿತ್ಯ;

೧೯೬೨: ಕಾವ್ಯೋದ್ಯೋಗ;

೧೯೬೮: ಕನ್ನಡ ಸಾಹಿತ್ಯದಲ್ಲಿ ನಾಲ್ಕು ನಾಯಕರತ್ನಗಳು;

೧೯೭೪: ಸಾಹಿತ್ಯದ ವಿರಾಟ್ ಸ್ವರೂಪ;

೧೯೭೬: ಕುಮಾರವ್ಯಾಸ ಪುಸ್ತಿಕೆ;

[ಬದಲಾಯಿಸಿ] ಸಣ್ಣ ಕಥೆ

೧೯೪೦: ನಿರಾಭರಣ ಸುಂದರಿ;


[ಬದಲಾಯಿಸಿ] ನಾಟಕಗಳು

  • ದೆವ್ವದ ಮನೆ;
  • ಹಳೆಯ ಗೆಣೆಯರು;
  • ಸಾಯೊ ಆಟ;
  • ತಿರುಕರ ಪಿಡುಗು;
  • ಗೋಲ್;
  • ಉದ್ಧಾರ;
  • ಜಾತ್ರೆ;
  • ನಗೆಯ ಹೊಗೆ;
  • ಮಂದೀ ಮದಿವಿ;
  • ಮಂದೀ ಮಕ್ಕಳು;
  • ಮಂದೀ ಮನಿ;
  • ಆ ಥರಾ ಈ ಥರಾ;
  • ಶೋಭನಾ;
  • ಮಕ್ಕಳು ಅಡಿಗೆ ಮನೆ ಹೊಕ್ಕರೆ;

[ಬದಲಾಯಿಸಿ] ಅನುವಾದ

  • ಉಪನಿಷತ್ ರಹಸ್ಯ( ಮೂಲ: ಶ್ರೀ ರಾನಡೆ[[1]]);
  • ಭಾರತೀಯ ನವಜನ್ಮ(ಮೂಲ:ಶ್ರೀ ಅರವಿಂದ[[2]] );
  • ಶ್ರೀ ಅರವಿಂದರ ಯೋಗ, ಆಶ್ರಮ ಮತ್ತು ತತ್ವೊಪದೇಶ;
  • ಚೀನಾದ ಬಾಳು ಬದುಕು;
  • ಗುರು ಗೋವಿಂದಸಿಂಗ;
  • ನೂರೊಂದು ಕವನ( ಮೂಲ: ಶ್ರೀ ರವೀಂದ್ರನಾಥ ಠಾಕೂರ);
  • ಕಬೀರ ವಚನಾವಲಿ;
  • ಭಗ್ನಮೂರ್ತಿ(ಮೂಲ ಮರಾಠಿ: ಶ್ರೀ ಅ.ರಾ.ದೇಶಪಾಂಡೆ);

[ಬದಲಾಯಿಸಿ] ಮರಾಠಿ ಕೃತಿಗಳು

  • ಸಂವಾದ;
  • ವಿಠ್ಠಲ ಸಂಪ್ರದಾಯ;
  • ಸಂತ, ಮಹಂತ,ಪೂರ್ಣ ಶಂಭೂ ವಿಠ್ಠಲ;
  • ವಿಠ್ಠಲ ಪಾಂಡುರಂಗ (ಕವನ ಸಂಗ್ರಹ);

[ಬದಲಾಯಿಸಿ] ಇಂಗ್ಲಿಷ ಕೃತ

  • A theory of Immortality of probable problem and possible solution

[ಬದಲಾಯಿಸಿ] ಗೌರವ ಪ್ರಶಸ್ತಿಗಳು

ಅವರಿಗೆ ಸಂದ ಗೌರವಗಳು ಹಲವು. ಡಾಕ್ಟರೇಟ್ ಪದವಿ, ಕೇಳ್ಕರ್ ಬಹುಮಾನ (೧೯೬೫ರಲ್ಲಿ ಮರಾಠಿಯಲ್ಲಿ ರಚಿಸಿದ "ಸಂವಾದ" ಎಂಬ ಕೃತಿಗೆೆ), ಅವರ "ಅರಳು ಮರಳು" ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ (೧೯೫೮ರಲ್ಲಿ), ೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿ, ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ -ಮೊದಲಾದ ಅನೇಕ ಗೌರವಗಳು ಅವರಿಗೆ ಲಭಿಸಿದವು. ೧೯೬೪ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬೇಂದ್ರೆಯವರನ್ನು ಗೌರವಿಸಲಾಯಿತು. ಅದೇ ವರ್ಷ ಅವರ ನಾಕುತಂತಿ ಕವನ ಸಂಕಲನವು ಪ್ರಕಾಶಿಸಲ್ಪಟ್ಟಿತು.

೧೯೭೩ರಲ್ಲಿ ಬೇಂದ್ರೆಯವರ ನಾಕುತಂತಿ ಕವನ ಸಂಗ್ರಹವನ್ನು ಜ್ಞಾನಪೀಠ ಪ್ರಶಸ್ತಿಗಾಗಿ ಆರಿಸಿತು. ಅದೇ ವರ್ಷ ಒರಿಯಾ ಭಾಷೆಯ ಲೇಖಕ ಗೋಪಿನಾಥ ಮೊಹಂತಿ ಅವರೂ ಈ ಗೌರವಕ್ಕೆ ಅರ್ಹರಾದರು. ಆ ವರ್ಷದ ಪ್ರಶಸ್ತಿ ಮೌಲ್ಯವನ್ನು ಇಬ್ಬರಿಗೂ ಹಂಚಲಾಯಿತು.

[ಬದಲಾಯಿಸಿ] ಬಾಹ್ಯ ಸಂಪರ್ಕಗಳು

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು

ಕನ್ನಡ
ಕುವೆಂಪು | ದ.ರಾ.ಬೇಂದ್ರೆ | ವಿನಾಯಕ ಕೃಷ್ಣ ಗೋಕಾಕ | ಶಿವರಾಮ ಕಾರಂತ | ಮಾಸ್ತಿ ವೆಂಕಟೇಶ ಅಯ್ಯಂಗಾರ್ | ಯು.ಆರ್.ಅನಂತಮೂರ್ತಿ | ಗಿರೀಶ್ ಕಾರ್ನಾಡ್
ಹಿಂದಿ
ಮಹಾದೇವಿ ವರ್ಮ | ನಿರ್ಮಲಾ ವರ್ಮ | ಸುಮಿತ್ರಾ ನಂದನ್ ಪಂತ್ | ರಾಮ್‍ಧಾರಿ ಸಿಂಘ್ ದಿನಕರ್ | ಅಜ್ಞೇಯ | ನರೇಶ್ ಮೆಹ್ತಾ | ನಿರ್ಮಲ್ ವರ್ಮಾ
ಬೆಂಗಾಲಿ
ಮಹಾಶ್ವೇತಾದೇವಿ
ಗುಜರಾತಿ
ರಾಜೇಂದ್ರ ಕೇಶವ್‌ಲಾಲ್ ಷಾ
ಮರಾಠಿ
ವಿಂದಾ ಕರಂದೀಕರ್ | ಕುಸುಮಾಗ್ರಜ್
ತೆಲುಗು
ವಿಶ್ವನಾಥ ಸತ್ಯನಾರಾಯಣ
ಮಳಯಾಳಂ
ಎಂ.ಟಿ.ವಾಸುದೇವನ್ ನಾಯರ್ | ಜಿ. ಶಂಕರ ಕುರುಪ್

ಇತರ ಭಾಷೆಗಳು