ಶಾಂತರಸ ಹೆಂಬೆರಳು

From Wikipedia

ಶಾಂತರಸ ಹೆಂಬೆರಳು
ಶಾಂತರಸ ಹೆಂಬೆರಳು

ಶಾಂತರಸ ಹೆಂಬೆರಳು (ಜನನ: ಸೆಪ್ಟೆಂಬರ್ ೭, ೧೯೨೪) ರಾಯಚೂರು ಜಿಲ್ಲೆಯ ಹೆಂಬೆರಳು ಹಳ್ಳಿಯಲ್ಲಿ ಜನಿಸಿದ ಇವರು ಕನ್ನಡದ ಒಬ್ಬ ಸಾಹಿತಿ. ಇವರು ೧೯೯೨ರಲ್ಲಿ ತಮಗೆ ನೀಡಲಾಗಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಭ್ರಷ್ಟ ಸರಕಾರ, ಜನೋಪಯೋಗಿಯಗಿಲ್ಲದ ಸರಕಾರದಿಂದ ಪ್ರಶಸ್ತಿ ಪಡೆಯುವುದಿಲ್ಲವೆಂದು ಹೇಳಿ ತಿರಸ್ಕರಿಸಿದ್ದರು.

೨೦೦೬ರ ೭೩ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿರುವರು.





[ಬದಲಾಯಿಸಿ] ಜೀವನ

ಶಾಂತರಸ ಹೆಂಬೆರಳು
ಶಾಂತರಸ ಹೆಂಬೆರಳು

ಇವರ ತಂದೆ ಚನ್ನಬಸಯ್ಯ ಹಿರೇಮಠ - ಕನ್ನಡ ಮತ್ತು ಸಂಸ್ಕೃತ ಪಂಡಿತರಾಗಿದ್ದರು.

ಶಾಂತರಸ ಹಂದರ್ದ್ ಸೊಸೈಟ್ ಆಫ್ ರಾಯಚೂರು ಶಿಕ್ಷಣ ಸಂಸ್ಥೆಯಲ್ಲಿ ಪ್ರಮೆರಿ ಶಾಲೆಯ ಶಿಕ್ಷಕರಾಗಿದ್ದರು. ೧೯೮೧ರಲ್ಲಿ ಅದೇ ಸಂಸ್ಥೆಯಲ್ಲಿ ಪ್ರಾಂಶುಪಾಲರಾದರು. ೧೯೪೨ರ 'ಬ್ರಿಟಿಷರೆ, ಭಾರತ ಬಿಟ್ಟು ತೊಲಗಿ' ಅಭಿಯಾನ ನಡೆಯುತ್ತಿರುವಾಗ ಇವರು ಕವನ, ಕಥೆ ಬರೆಯಲು ಪ್ರಾರಂಭಿಸಿದ್ದು.

ಇವರು ರಾಯಚೂರಿನಲ್ಲೊ ಸತ್ಯ ಸ್ನೇಹ ಪ್ರಕಾಶನವನ್ನು ಪ್ರಾರಂಭಿಸಿದ್ದಾರೆ. ಹಲವು ಗಝಲ್, ರುಬಾಯಿ, ಫರ್ದ್ ಗಳನ್ನು ಉರ್ದುವಿನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ.

ಶಾಂತರಸ ೪೬ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಇವರು ೧೯೯೫ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಪಠ್ಯ ಪುಸ್ತಕ ಕಮಿಟಿಯಲ್ಲೂ ಸೇವೆ ಸಲ್ಲಿಸಿದ್ದಾರೆ.

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ಟೆಂಪ್ಲೇಟ್ ದೊಡ್ಡದಾಗಿರುವುದರಿಂದ ಇನ್ನು ಮುಂದೆ ಸಾಹಿತಿಗಳು ಟೆಂಪ್ಲೇಟನ್ನು ಬಳಸಲಾಗುವುದಿಲ್ಲ. ಈ ಟೆಂಪ್ಲೇಟ್ ಲೇಖನವೊಂದರಲ್ಲಿ ನಿಮಗೆ ಕಂಡುಬಂದಲ್ಲಿ ಲೇಖನ ಪುಟದಿಂದ {{ಸಾಹಿತಿಗಳು}}ಎಂಬ ಸೇರ್ಪಡೆಯನ್ನು ತೆಗೆದುಹಾಕಿ.