ಕುವೆಂಪು

From Wikipedia

ಕುವೆಂಪು
Enlarge
ಕುವೆಂಪು

ಕುವೆಂಪು - ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (೧೯೦೪ - ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, 'ರಾಷ್ಟ್ರಕವಿ'. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದ ಪ್ರಥಮ ವ್ಯಕ್ತಿ. 'ವಿಶ್ವ ಮಾನವ'. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ.


ಪರಿವಿಡಿ

[ಬದಲಾಯಿಸಿ] ಜೀವನ

ಡಿಸೆಂಬರ್ ೨೯, ೧೯೦೪, ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದರು.

[ಬದಲಾಯಿಸಿ] ಸಂದೇಶ

ಓ ನನ್ನ ಚೇತನ, ಆಗು ನೀ ಅನಿಕೇತನ

[ಬದಲಾಯಿಸಿ] ಸಾಹಿತ್ಯ

ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ ೧೯೫೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ೧೯೫೫ ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು. ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿ ಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕೃತಗೊಂಡ ಇವರು 'ಜೈ ಭಾರತ ಜನನಿಯ ತನುಜಾತೆ...' ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರು ಕವಿ. ಇವರು ಬರೆದ 'ಸ್ವಾಮಿ ವಿವೇಕಾನಂದ'ರ ಬಗೆಗಿನ ಕೃತಿ ಬಹಳ ಜನಪ್ರಿಯವಾದದ್ದು.

[ಬದಲಾಯಿಸಿ] ಶ್ರೀ ರಾಮಾಯಣ ದರ್ಶನಂ

ಕುವೆಂಪುರವರು ಬರೆದ ಈ ಕೃತಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿತು. ಕನ್ನಡದ ಅತ್ಯಮೂಲ್ಯ ಗ್ರಂಥಗಳಲ್ಲಿ ಒಂದು, ಈ ಕೃತಿ. ಈ ಕೃತಿ ಕನ್ನಡದ ಮೊದಲ ಆಧುನಿಕ ಮಹಾಕಾವ್ಯ; ಸರಳರಗಳೆಯನ್ನು ಕನ್ನಡದಲ್ಲಿ ಮೊಟ್ಟಮೊದಲ ಬಾರಿಗೆ ಬಳಸಲಾಗಿದೆ.

[ಬದಲಾಯಿಸಿ] ಕೃತಿಗಳು

ಕಾದಂಬರಿ:

ನಾಟಕಗಳು:

ಚಿತ್ರ ಪ್ರಬಂಧ:

ವಿಚಾರ:

ಆತ್ಮ ಚರಿತ್ರೆ:

  • ನೆನಪಿನ ದೋಣಿಯಲ್ಲಿ

ಕಾವ್ಯಗಳು:

  • ಶ್ರೀ ರಾಮಾಯಣ ದರ್ಶನ೦
  • ಕೊಳಲು
  • ಅಗ್ನಿಹಂಸ
  • ಅನಿಕೇತನ
  • ಅನುತ್ತರಾ
  • ಇಕ್ಶುಗಂಗೋತ್ರಿ
  • ಕದರಡಕೆ
  • ಕಥನ ಕವನಗಳು
  • ಕಲಾಸುಂದರಿ
  • ಕಿಂಕಿಣಿ
  • ಕೃತ್ತಿಕೆ
  • ಜೇನಾಗುವ
  • ನವಿಲು
  • ಪಕ್ಷಿಕಾಶಿ
  • ಚಿತ್ರಾಂಗದಾ
  • ಪ್ರೇತಕ್ಯು
  • ಪ್ರೇಮಕಾಶ್ಮೀರ
  • ಮಂತ್ರಾಕ್ಷತೆ
  • ಷೋಡಶಿ
  • ಹಾಳೂರು
  • ಕೋಗಿಲೆ
  • ಪಾಂಚಜನ್ಯ
  • ಕುಟೀಚಕ

[ಬದಲಾಯಿಸಿ] ಪ್ರಶಸ್ತಿ ಪುರಸ್ಕಾರಗಳು

[ಬದಲಾಯಿಸಿ] ಇತರೆ ಸಂಬಂಧಪಟ್ಟ ಪುಟಗಳು

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು

ಕನ್ನಡ
ಕುವೆಂಪು | ದ.ರಾ.ಬೇಂದ್ರೆ | ವಿನಾಯಕ ಕೃಷ್ಣ ಗೋಕಾಕ | ಶಿವರಾಮ ಕಾರಂತ | ಮಾಸ್ತಿ ವೆಂಕಟೇಶ ಅಯ್ಯಂಗಾರ್ | ಯು.ಆರ್.ಅನಂತಮೂರ್ತಿ | ಗಿರೀಶ್ ಕಾರ್ನಾಡ್
ಹಿಂದಿ
ಮಹಾದೇವಿ ವರ್ಮ | ನಿರ್ಮಲಾ ವರ್ಮ
ಬೆಂಗಾಲಿ
ಮಹಾಶ್ವೇತಾದೇವಿ
ಗುಜರಾತಿ
ರಾಜೇಂದ್ರ ಕೇಶವ್‌ಲಾಲ್ ಷಾ
ಮರಾಠಿ
ವಿಂದಾ ಕರಂದೀಕರ್ | ಕುಸುಮಾಗ್ರಜ್
ತೆಲುಗು
ವಿಶ್ವನಾಥ ಸತ್ಯನಾರಾಯಣ
ಮಳಯಾಳಂ
ಎಂ.ಟಿ.ವಾಸುದೇವನ್ ನಾಯರ್

ಇತರ ಭಾಷೆಗಳು