ಜನ್ನ
From Wikipedia
ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ. ಈತನು ಹೊಯ್ಸಳ ವೀರಬಲ್ಲಾಳನ ಆಸ್ಥಾನದಲ್ಲಿ ಕವಿಯಾಗಿದ್ದವನು. ಈತನ ತಂದೆ ಶಂಕರನು ಹೊಯ್ಸಳ ನಾರಸಿಂಹನಲ್ಲಿ ದಂಡಾಧೀಶನಾಗಿದ್ದನು ; ತಾಯಿ ಗಂಗಾದೇವಿ. ಶಬ್ದಮಣಿದರ್ಪಣವನ್ನು ರಚಿಸಿದ ವಯ್ಯಾಕರಣಿ ಕೇಶಿರಾಜನು ಜನ್ನನ ಸೋದರಳಿಯ.
ಜನ್ನನು ಕ್ರಿ.ಶ.೧೨೦೯ರಲ್ಲಿ ಯಶೋಧರ ಚರಿತ್ರೆಯನ್ನು ರಚಿಸಿದನು. ಜನ್ನನ ಎರಡನೆಯ ರಚನೆ ಅನಂತಪುರಾಣ.
ವರ್ಗಗಳು: ಚುಟುಕು | ಹಳಗನ್ನಡ ಕವಿಗಳು | ಕವಿಗಳು | ಸಾಹಿತಿಗಳು