ನಾಮದ ಚಿಲುಮೆ

From Wikipedia

ನಾಮದ ಚಿಲುಮೆ - ತುಮಕೂರು ಜಿಲ್ಲೆಯ ದೇವರಾಯನ ದುರ್ಗದ ಸಮೀಪವಿರುವ ಒಂದು ಪ್ರೇಕ್ಷಣೀಯ ಸ್ಥಳ. ಇದು ತುಮಕೂರು ನಗರದಿಂದ ೧೦ ಕಿ.ಮೀ ದೂರದಲ್ಲಿದೆ.

ರಾಮಾಯಣ ಕಾಲದಲ್ಲಿ ಶ್ರೀ ರಾಮಚಂದ್ರ, ಲಕ್ಷ್ಮಣ, ಸೀತೆ ಕೆಲ ಕಾಲ ದೇವರಾಯನದುರ್ಗ ಕಾಡಿನಲ್ಲಿ ವನವಾಸ ಅನುಭವಿಸಿದರು ಎಂಬ ಸ್ಥಳ ಪುರಾಣ ಇದೆ. ಒಮ್ಮೆ ರಾಮನಿಗೆ ಹಣೆಗೆ ತಿಲಕವಿಡುವ ಸಂದರ್ಭ ಬಂದಿತು. ನೀರಿಗಾಗಿ ಸುತ್ತಲೂ ನೋಡಿದರೂ ಎಲ್ಲಿಯೂ ನೀರು ಸಿಗಲೇ ಇಲ್ಲ. ಆಗ ಆ ಸ್ಥಳದಲ್ಲೇ ಬಾಣ ಹೂಡಿ ಒಂದು ಬಂಡೆಯ ಮೇಲೆ ಬಿಟ್ಟಾಗ, ಬಾಣ ಒಳಹೊಕ್ಕು ರಂಧ್ರವನ್ನು ಕೊರೆದು ಅಲ್ಲಿ ನೀರಿನ ಬುಗ್ಗೆ ಚಿಮ್ಮಿತು. ಆ ನೀರನ್ನು ತೆಗೆದುಕೊಂಡು ರಾಮ ತನ್ನ ಹಣೆಗೆ ನಾಮವನ್ನು ಧರಿಸಿದಂತೆ. ಹಾಗಾಗಿ ಈ ಚಿಲುಮೆಗೆ ನಾಮದ ಚಿಲುಮೆಎಂಬ ಹೆಸರು ಬಂದಿದೆ. ಕಡು ಬೇಸಿಗೆಯಲ್ಲೂ ಇಲ್ಲಿ ನೀರು ಚಿಮ್ಮುತ್ತಲೇ ಇರುವುದು ವಿಶೇಷ.












ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.