ಕೃಷ್ಣರಾಜಸಾಗರ

From Wikipedia

ಬೃಂದಾವನ ಉದ್ಯಾನ
Enlarge
ಬೃಂದಾವನ ಉದ್ಯಾನ

ಕೃಷ್ಣರಾಜಸಾಗರ ಮೈಸೂರಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು. ಈ ಅಣೆಕಟ್ಟಿನ ಜೊತೆಗೇ ನಿರ್ಮಿಸಲಾದ ಬೃಂದಾವನ ಉದ್ಯಾನ ಉತ್ತಮವಾದ ಪ್ರವಾಸಿ ಆಕರ್ಷಣೆ.

ಬೃಂದಾವನ ಉದ್ಯಾನದಲ್ಲಿ ಕಾರಂಜಿ
Enlarge
ಬೃಂದಾವನ ಉದ್ಯಾನದಲ್ಲಿ ಕಾರಂಜಿ

ಪರಿವಿಡಿ

[ಬದಲಾಯಿಸಿ] ಅಣೆಕಟ್ಟು

ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಜೀವನದಿಯಾದ ಕಾವೇರಿ ನದಿಗೆ ಅಡ್ಡಲಾಗಿ ಈ ಅಣೆಕಟ್ಟನ್ನು ಕಟ್ಟಲಾಗಿದೆ. ಇದನ್ನು ಕಟ್ಟಿದ ಸಮಯದಲ್ಲಿ ಇದು ಭಾರತದಲ್ಲಿ ಅತಿ ದೊಡ್ಡ ಅಣೆಕಟ್ಟಾಗಿತ್ತು. ಮೈಸೂರಿನ ದಿವಾನರಾಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಈ ಅಣೆಕಟ್ಟನ್ನು ಕಟ್ಟಿಸಿದ ಇಂಜಿನಿಯರರಲ್ಲಿ ಪ್ರಮುಖರು. ಕೃಷ್ಣರಾಜಸಾಗರ ಅಣೆಕಟ್ಟಿನ ಮುಖ್ಯ ಉದ್ದೇಶಗಳೆಂದರೆ ನೀರಾವರಿ ಮತ್ತು ನೀರು ಸರಬರಾಜು.

ಈ ಅಣೆಕಟ್ಟು ೮೬೦೦ ಅಡಿ ಉದ್ದವಿದ್ದು ೧೩೦ ಅಡಿ ಎತ್ತರವಿದೆ. ಸ್ವಯಂಚಾಲಿತ ಸ್ಲ್ಯೂಸ್ ಗೇಟ್ ಗಳನ್ನು ಉಪಯೋಗಿಸಿದ ಪ್ರಪಂಚದ ಮೊದಲ ಅಣೆಕಟ್ಟುಗಳಲ್ಲಿ ಇದೂ ಒಂದು.

[ಬದಲಾಯಿಸಿ] ಬೃಂದಾವನ ಉದ್ಯಾನ

ಬೃಂದಾವನ ಉದ್ಯಾನ ಕೃಷ್ಣರಾಜಸಾಗರ ಅಣೆಕಟ್ಟಿಗೆ ಹೊಂದಿಕೊಂಡಂತೆ ಕಟ್ಟಲಾದ ಸುಂದರ ಉದ್ಯಾನ. ಇದರ ತುಂಬ ಆಕರ್ಷಕವಾದ ನೀರಿನ ಕಾರಂಜಿಗಳಿವೆ. ಇಲ್ಲಿನ ಪ್ರಸಿದ್ಧ ಸಂಗೀತ ಕಾರಂಜಿ ಪ್ರವಾಸಿಗಳನ್ನು ಅನೇಕ ದಶಕಗಳಿಂದ ಆಕರ್ಷಿಸಿದೆ. ಇದಲ್ಲದೆ ಅನೇಕ ಜೀವಶಾಸ್ತ ಸಂಶೋಧನಾ ಇಲಾಖೆಗಳು ಇಲ್ಲಿಯೇ ಕೆಲಸ ನಡೆಸುತ್ತವೆ. ಪ್ರವಾಸಿಗಳಿಗೆ ಒಂದು ತಂಗುದಾಣವನ್ನು ಬೃಂದಾವನ ಉದ್ಯಾನದಲ್ಲಿ ಕಟ್ಟಿಸಲಾಗಿದೆ.

[ಬದಲಾಯಿಸಿ] ಚರಿತ್ರೆ

ಕೃಷ್ಣರಾಜಸಾಗರ ಅಣೆಕಟ್ಟು ಮತ್ತು ಬೃಂದಾವನ ಉದ್ಯಾನವನ್ನು ಕಟ್ಟುವ ಯೋಜನೆ ಮೈಸೂರು ಸಂಸ್ಥಾನದ ದಿವಾನರಿಂದ ಆರಂಭವಾದದ್ದು. ಶ್ರೀ ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಈ ಕೆಲಸವನ್ನು ಕೈಗೊಂಡು ಪೂರ್ತಿಗೊಳಿಸಿದರು. ಅಣೆಕಟ್ಟನ್ನು ೧೯೩೨ ರಲ್ಲಿ ಕಟ್ಟಿ ಮುಗಿಸಲಾಯಿತು.

[ಬದಲಾಯಿಸಿ] ಬಾಹ್ಯ ಸಂಪರ್ಕಗಳು

ಇತರ ಭಾಷೆಗಳು