ನೃಪತುಂಗ
From Wikipedia
ನೃಪತುಂಗನು ರಾಷ್ಟ್ರಕೂಟ ವಂಶದ ರಾಜನಾಗಿದ್ದನು. ರಾಷ್ಟ್ರಕೂಟರ ಕಾಲದಲ್ಲಿ ಕನ್ನಡದಲ್ಲಿ ಹಲವಾರು ರೀತಿಯ ರಚನೆಗಳು ಇದ್ದವೆಂದು ತಿಳಿದು ಬರುವುದು. ಬದಂಡೆ, ಚತ್ರಾಣ, ಮುಂತಾದ ಕಾವ್ಯಭೇದಗಳಿದ್ದವು. ಪ್ರಾಂತದ ಭಾಷೆ ತಿರುಳುಗನ್ನಡವೆಂದು ಹೆಸರು ಪಡೆದಿತ್ತು. ಆ ಸಮಯದಲ್ಲಿ ಮತ್ತು ನೃಪತುಂಗನಿಗಿಂತಲು ಹಿಂದೆ ಅನೇಕ ಕವಿಗಳಿದ್ದರೆಂದು ರಾಜಾ ನೃಪತುಂಗನು ತನ್ನ ’’ಕವಿರಾಜಮಾರ್ಗ’’ ಕೃತಿಯಲ್ಲಿ ತಿಳಿಸಿದ್ದಾನೆ. ರಾಮಾಯಣ, ಮಹಾಭಾರತಗಳ ಸಂಕ್ಷಿಪ್ತ ಕನ್ನಡರೂಪ ಲಭ್ಯವಾಗಿದ್ದವು. ೫ ನೇ ಶತಮಾನದ ಕನ್ನಡದ ಶಾಸನದ ನಂತರದಲ್ಲಿ ಪ್ರಥಮವಾಗಿ ರಚಿತವಾಗಿರುವ ಕವಿರಾಜಮಾರ್ಗದಲ್ಲಿ ಕಾವೇರಿಯಿಂದ ಗೋದಾವರಿಯವರೆಗೆ ಇದ್ದ ನಾಡು ಕನ್ನಡನಾಡೆಂದು ತಿಳಿಸಲಾಗಿದೆ. ಆ ಸಮಯದಲ್ಲಿ ಹಲವಾರು ಜೈನ ಕವಿಗಳಿದ್ದರು. ಶಿವಕೋಟಿ ಆಚಾರ್ಯನ ‘’ವಡ್ಡಾರಾಧನೆ’’ ಪ್ರಥಮ ಗದ್ಯಕೃತಿ ರಚಿತವಾಗಿತ್ತು. ನೃಪತುಂಗನ ರಚನೆಯು ಶಾಸ್ತ್ರಗ್ರಂಥವಾಗಿರುವದು. ಕಾವ್ಯದೋಷಗಳು, ಅಲಂಕಾರಗಳು ಈ ಗ್ರಂಥದಲ್ಲಿ ವರ್ಣಿತವಾಗಿವೆ. ಕನ್ನಡನಾಡಿನ ಜನರು ‘’ಓದದೆಯೇ ಕಾವ್ಯ ಪ್ರಯೋಗದಲ್ಲಿ ನಿಪುಣರು’’ ಎಂದು ನೃಪತುಂಗನು ಹೊಗಳಿದ್ದಾನೆ. ಇವನ ಗ್ರಂಥದಲ್ಲಿ ಹಲವಾರು ಸುಂದರ ಪದ್ಯಗಳಿರುವವು. ರಾಜನಾಗಿಯೂ ಸಹ ನೃಪತುಂಗ ಉತ್ತಮ ಆಡಳಿತವನ್ನು ನಡೆಸಿದನು. ಶ್ರೀ ವಿಜಯನೆಂಬುವವನು ’’ಕವಿರಾಜಮಾರ್ಗ’’ ಕಾವ್ಯ ಬರೆದ್ನೆಂದೂ ಪ್ರತೀತಿ ಇದೆ.
ಟೆಂಪ್ಲೇಟ್ ದೊಡ್ಡದಾಗಿರುವುದರಿಂದ ಇನ್ನು ಮುಂದೆ ಸಾಹಿತಿಗಳು ಟೆಂಪ್ಲೇಟನ್ನು ಬಳಸಲಾಗುವುದಿಲ್ಲ. ಈ ಟೆಂಪ್ಲೇಟ್ ಲೇಖನವೊಂದರಲ್ಲಿ ನಿಮಗೆ ಕಂಡುಬಂದಲ್ಲಿ ಲೇಖನ ಪುಟದಿಂದ {{ಸಾಹಿತಿಗಳು}}ಎಂಬ ಸೇರ್ಪಡೆಯನ್ನು ತೆಗೆದುಹಾಕಿ.