ಸಂಗೊಳ್ಳಿ ರಾಯಣ್ಣ
From Wikipedia
ಸಂಗೊಳ್ಳಿ ರಾಯಣ್ಣ - ಬ್ರಿಟೀಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ.
ಬ್ರಿಟೀಷರ ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು. ಬ್ರಿಟೀಷರು ಚನ್ನಮ್ಮನನ್ನು ಬೈಲಹೊಂಗಲದಲ್ಲಿ ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದರು. ಗಲ್ಲಿಗೇರಿಸಿದ ದಿನಾಂಕ ಜನವರಿ ೨೬.
ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ ಆಗಸ್ಟ್ ೧೫, ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ ಜನವರಿ ೨೬, ಭಾರತವು ಗಣರಾಜ್ಯವೆಂದು ಘೋಷಿಸಿದ ದಿನಾಂಕವಾಗಿದೆ.
[ಬದಲಾಯಿಸಿ] ಕೊನೆಯ ಉಕ್ತಿ
ಸಂಗೊಳ್ಳಿ ರಾಯಣ್ಣನು ಗಲ್ಲಿಗೇರುವ ಮುನ್ನ ಹೇಳಿದ ಕೊನೆಯ ಮಾತು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ.
“ನನ್ನ ಕೊನೆ ಆಸೆ ಯಾವುದೆಂದರೆ ಮತ್ತೆ ನಾನು ಈ ದೇಶದಲ್ಲಿ ಜನ್ಮ ತಾಳಿ, ಈ ಪುಣ್ಯ ಭೂಮಿಯಿಂದ ಬ್ರಿಟೀಷರ ವಿರುದ್ಧ ಹೋರಾಟವನ್ನು ಮುಂದುವರಿಸುವುದು”[1].